HEALTH TIPS

ಯಾವುದೇ ಶೀರ್ಷಿಕೆಯಿಲ್ಲ

Top Post Ad

Click to join Samarasasudhi Official Whatsapp Group

Qries

                ಮುಳ್ಳೇರಿಯದಲ್ಲಿ ಧನ್ವಂತರೀ ಯಾಗ ಕಾರ್ಯಕ್ರಮಗಳು ಆರಂಭ
     ಮುಳ್ಳೇರಿಯ: ಇಲ್ಲಿನ ವಿದ್ಯಾಶ್ರೀ ಯಾಗ ಸಮಿತಿಯ ನೇತೃತ್ವದಲ್ಲಿ, ವಿದ್ಯಾಶ್ರೀ ಶಿಕ್ಷಣ ಕೇಂದ್ರದ ಆಶ್ರಯದಲ್ಲಿ ಅಷ್ಟೋತ್ತರ ಸಹಸ್ರ ನಾಳಿಕೇರ ಗಣಯಾಗ, ಮೇಧಾ ಸರಸ್ವತೀ ಯಾಗ ಮತ್ತು ಧನ್ವಂತರೀ ಯಾಗ ಕಾರ್ಯಕ್ರಮಗಳು ಶುಕ್ರವಾರ  ಆರಂಭಗೊಂತು.
    ಗುರುವಾರ ಮಲ್ಲ ಶ್ರೀ ದುಗರ್ಾಪರಮೇಶ್ವರೀ ಕ್ಷೇತ್ರದ ಆಡಳಿತೆ ಮೊಕ್ತೇಸರ ಆನೆಮಜಲು ವಿಷ್ಣು ಭಟ್ ಉಗ್ರಾಣ ಮುಹೂರ್ತ ನೆರವೇರಿಸಿದರು. ಶುಕ್ರವಾರ ಸಂಜೆ  ಬೇಂಗತ್ತಡ್ಕ ಶ್ರೀ ಅಯ್ಯಪ್ಪ ಭಜನಾ ಮಂದಿರದ ಪರಿಸರದಿಂದ ಮುಳ್ಳೇರಿಯ ಗಣೇಶ ಕಲಾ ಮಂದಿರಕ್ಕೆ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ವಾದ್ಯಘೋಷಗಳೊಂದಿಗೆ ನಡೆಯಿತು.
   ಡಿ.30ರಂದು 9.30ರಿಂದ ಯಾಗಗಳ ಬಗ್ಗೆ ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು, ವೇದಮೂತರ್ಿ ಕಶೆಕ್ಕೋಡಿ ಸೂರ್ಯನಾರಾಯಣ ಭಟ್, ಶ್ರೀಕೃಷ್ಣ ಉಪಾಧ್ಯಾಯ ಸುಳ್ಯ  ಉಪನ್ಯಾಸ ನೀಡಿದರು. 11.15ರಿಂದ ಅಗ್ನಿಹೋತ್ರ ಪ್ರಾತ್ಯಕ್ಷಿತೆ, ವಿವರಣೆ, ಚಚರ್ೆ,  2ರಿಂದ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ವಿದ್ಯಾಥರ್ಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, 5.30ಕ್ಕೆ ಧಾಮರ್ಿಕ ಸಭಾಕಾರ್ಯಕ್ರಮದಲ್ಲಿ ಎಡನೀರು ಮಠದ ಶ್ರೀ ಕೇಶವಾನಂದ ಭಾರತೀ ಶ್ರೀಪಾದಂಗಳವರಿಂದ ಆಶೀರ್ವಚನ ನೀಡಿದರು. ಕಾಸರಗೋಡು ಶ್ರೀ ಮಲ್ಲಿಕಾಜರ್ುನ ಕ್ಷೇತ್ರ ಜೀಣರ್ೋದ್ಧಾರ ಸಮಿತಿ ಕಾಯರ್ಾಧ್ಯಕ್ಷ ರಾಮಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು, ವೇದಮೂತರ್ಿ ಕಶೆಕ್ಕೋಡಿ ಸೂರ್ಯನಾರಾಯಣ ಭಟ್, ಶ್ರೀಕೃಷ್ಣ ಉಪಾಧ್ಯಾಯ ಸುಳ್ಯ, ಅಗಲ್ಪಾಡಿ ಶ್ರೀಕ್ಷೇತ್ರದ ಆಡಳಿತೆ ಮೊಕ್ತೇಸರ ವಾಸುದೇವ ಭಟ್ ಉಪ್ಪಂಗಳ, ಕುಂಡಂಗುಳಿ ಶ್ರೀ ಪಂಚಲಿಂಗೇಶ್ವರ ಕ್ಷೇತ್ರದ ಅಧ್ಯಕ್ಷ ಕೆ.ವೇಣುಗೋಪಾಲನ್ ಉಪಸ್ಥಿತರಿದ್ದರು.
    ಇಂದಿನ ಕಾರ್ಯಕ್ರಮ:
    ಡಿ.31ರಂದು ಪ್ರಾತಃಕಾಲ 5ಕ್ಕೆ ಯಾಗಗಳ ಪ್ರಾರಂಭ, 10.45ಕ್ಕೆ ಯಾಗಕ್ಕೆ ಸುವಸ್ತು ಸಮರ್ಪಣೆ, ಉಡುಪಿ ಬಾಳೆಕುದ್ರು ಶ್ರೀ ನೃಸಿಂಹಾಶ್ರಮ ಸ್ವಾಮೀಜಿಯವರಿಂದ ಆಶೀರ್ವಚನ, ಗಾಯಕ ಶಶಿಧರ ಕೋಟೆ ಬೆಂಗಳೂರು ಮುಖ್ಯ ಅಥಿತಿಗಳಾಗಿ ಭಾಗವಹಿಸುವರು. ಮಧ್ಯಾಹ್ನ 12ಕ್ಕೆ ಮೇಧಾ ಸರಸ್ವತೀ ಯಾಗದ ಮಹಾ ಮಂಗಳಾರತಿ, ಪ್ರಸಾದ ವಿತರಣೆ, 1ಕ್ಕೆ ಅನ್ನ ಸಂತರ್ಪಣೆ ನಡೆಯಲಿದೆ.
 


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries