HEALTH TIPS

No title

                 ಶ್ರೀನಗರ ಆಸ್ಪತ್ರೆ ಮೇಲೆ ಉಗ್ರರ ದಾಳಿ: ಇಬ್ಬರು ಪೊಲೀಸರು ಹುತಾತ್ಮ, ಬಂಧಿತ ಪಾಕ್ ಉಗ್ರ ಪರಾರಿ!
     ಶ್ರೀನಗರ: ಬಂಧಿತ ಉಗ್ರನನ್ನು ವೈದ್ಯಕೀಯ ತಪಾಸಣೆಗೆ ಆಸ್ಪತ್ರೆಗೆ ಕರೆತಂದಿದ್ದ ವೇಳೆ ಉಗ್ರರು ಆಸ್ಪತ್ರೆ ಮೇಲೆ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ. ಅಲ್ಲದೆ  ಬಂಧಿತ ಪಾಕಿಸ್ತಾನ ಮೂಲದ ಉಗ್ರಗಾಮಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
    ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರದ ಶ್ರೀಮಹಾರಾಜ್ ಹರಿ ಸಿಂಗ್(ಎಸ್ಎಂಎಚ್ಎಸ್) ಸಕರ್ಾರಿ ಆಸ್ಪತ್ರೆಯಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ಪೊಲೀಸರು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ. ಅಂತೆಯೇ ಘಟನೆಯಲ್ಲಿ ಇಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ.
    ಮೂಲಗಳ ಪ್ರಕಾರ ಈ ಹಿಂದೆ ಶೋಪಿಯಾನ್ ನಲ್ಲಿ ನಡೆದ ಸೇನಾ ಕಾಯರ್ಾಚರಣೆ ವೇಳೆ ಪಾಕಿಸ್ತಾನ ಮೂಲದ ಉಗ್ರಗಾಮಿ ನವೀದ್ ಜಟ್ಟ್ ಎಂಬಾತನನ್ನು ಬಂಧಿಸಲಾಗಿತ್ತು. ಈತನನ್ನು ಇಂದು ವೈದ್ಯಕೀಯ ತಪಾಸಣೆಗಾಗಿ  ಶ್ರೀನಗರದ ಸಕರ್ಾರಿ ಆಸ್ಪತ್ರೆಗೆ ಕರೆತಂದಿದ್ದ ವೇಳೆ ಉಗ್ರರು ದಾಳಿ ನಡೆಸಿದ್ದಾರೆ. ನವೀದ್ನನ್ನು ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಪೊಲೀಸ್ ಬೆಂಗಾವಲಿನಲ್ಲಿ ಕರೆ ತರಲಾಗುತ್ತಿತ್ತು. ಈ ವೇಳೆ ದಾಳಿ ನಡೆಸಿದ ಉಗ್ರರು ಕೈದಿ  ಪರಾರಿಯಾಗಲು ನೆರವಾಗಿದ್ದಾರೆ.
  ದಾಳಿಯ ಬಳಿಕ ಉಗ್ರರು ಕೂಡ ಸ್ಥಳದಿಂದ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಘಟನೆಯ ಬಳಿಕ ಆಸ್ಪತ್ರೆಯ ಸುತ್ತ ಭದ್ರತಾ ಪಡೆಗಳು ಸುತ್ತುವರಿದಿದ್ದು, ಆಸ್ಪತ್ರೆಯನ್ನು ಸಂಪಕರ್ಿಸುವ ರಸ್ತೆಗಳಲ್ಲಿ  ನಾಕಾ ಬಂದಿ ಹಾಕಲಾಗಿದೆ. ಅಂತೆಯೇ ಸುತ್ತಮುತ್ತಲ ಪ್ರದೇಶದಲ್ಲಿ ಹೈ ಅಲಟರ್್ ಘೋಷಣೆ ಮಾಡಲಾಗಿದ್ದು, ತೀವ್ರ ಶೋಧ ಕಾಯರ್ಾಚರಣೆ ಆರಂಭಿಸಲಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries