HEALTH TIPS

No title

                ಕುಳೂರು ಶಾಲೆಯಲ್ಲಿ ಮಧುರ ಕನ್ನಡ ವಿಜಯ ಘೋಷಣೆ:
   ಮಂಜೇಶ್ವರ: ಕುಳೂರಿನಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 'ಮಧುರ ಕನ್ನಡ ವಿಜಯ ಘೋಷಣೆ' ಕಾರ್ಯಕ್ರಮ ಗುರುವಾರ ನಡೆಯಿತು.
   ಕಾರ್ಯಕ್ರಮವನ್ನು ಗ್ರಾ.ಪಂ. ಸದಸ್ಯೆ ಚಂದ್ರಾವತಿ ವಿ.ಪಿ ಉದ್ಘಾಟಿಸಿ ಮಾತನಾಡಿ 'ಸಾರ್ವಜನಿಕ ಶಿಕ್ಷಣ ಯಜ್ಞದ ಭಾಗವಾಗಿ ನಡೆಯುವ ಇಂತಹ ಕಾರ್ಯಕ್ರಮಗಳು ಮಕ್ಕಳನ್ನು ಕಲಿಕೆ, ವಿಷಯ ಗ್ರಹಿಕೆಗಳಲ್ಲಿ ಇನ್ನಷ್ಟು ಮುಂದೆ ಬರುವಂತೆ ಪ್ರೇರೇಪಿಸುತ್ತದೆ. ಎಲ್ಲರಿಗೂ ಅಂಗೀಕಾರ ದೊರೆತು ಶಾಲೆಯು ಉತ್ತಮ ಫಲಿತಾಂಶವನ್ನು ಪಡೆಯಲು ಸಾಧ್ಯವಾಗುತ್ತಿದೆ' ಎಂದರು. 
  ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪ್ರಮೋದ್ ಶೆಟ್ಟಿ ಶಾಲೆದಪಡ್ಪು ವಹಿಸಿದ್ದರು. ಮಾತೃ ಸಂಘದ ಅಧ್ಯಕ್ಷೆ ಆಶಾಲತಾ ಕುಳೂರು, ಶಾಲಾ ಮುಖ್ಯೋಪಾಧ್ಯಾಯ ಸತ್ಯನಾರಾಯಣ ಶಮರ್ಾ ಉಪಸ್ಥಿತರಿದ್ದರು. ಗ್ರಾ.ಪಂ. ಸದಸ್ಯೆ ಈ ಅಸಂದರ್ಭ ಮಧುರ ಕನ್ನಡ ಮಕ್ಕಳಿಗೆ ಕೆಲವು ಓದಿನ ಕಾಡರ್ುಗಳನ್ನು ನೀಡಿ ಓದಿಸುವ ಮೂಲಕ ವಿಜಯ ಘೋಷಣೆ ಮಾಡಲಾಯಿತು. ಎಲ್ಲಾ ರಕ್ಷಕರು ಇದಕ್ಕೆ ಸಾಕ್ಷಿಯಾದರು. ಶಾಲಾ ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿ, ಶಿಕ್ಷಕಿ ಸೌಮ್ಯ ಪಿ ವಂದಿಸಿದರು.
 



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries