HEALTH TIPS

No title

            ಬಾಹುಬಲಿ ವಿಶ್ವಕ್ಕೆ ಶಾಂತಿಯ ಸಂಕೇತವಾಗಿದ್ದಾರೆ: ರಾಷ್ಟ್ರಪತಿ ಕೋವಿಂದ್
    ಹಾಸನ: ಬಾಹುಬಲಿಯ ತ್ಯಾಗದ ತತ್ವ ಮತ್ತು ಅಹಿಂಸೆ ವಿಶ್ವಕ್ಕೆ ಮಾದರಿಯಾಗಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬುಧವಾರ ಹೇಳಿದ್ದಾರೆ.
ಬುಧವಾರ  ಜೈನಕಾಶಿ ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಐತಿಹಾಸಿಕ 88ನೇ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ರಾಷ್ಟ್ರಪತಿಗಳು, ತುಂಬಾ ಸಂತೋಷದಿಂದ ಈ ಕಾರ್ಯಕ್ರಮದಲ್ಲಿ ನಾನು ಭಾಗವಹಿಸಿದ್ದೇನೆ ಎಂದರು.
  ನಾನು ಮೂರನೇ ಬಾರಿ ಕನರ್ಾಟಕಕ್ಕೆ ಭೇಟಿ ನೀಡುತ್ತಿದ್ದೇನೆ, ಅಹಿಂಸೆಯ ಪರಂಪರೆಯನ್ನು ಸೂಚಿಸುವ ಮಹಮಸ್ತಕಾಭಿಷೇಕ ಸಂಭ್ರಮದಲ್ಲಿ ಭಾಗಿಯಾಗಿರುವುದು ನನ್ನ ಪುಣ್ಯ ಎಂದರು.
  ಶ್ರವಣ ಬೆಳಗೊಳದಲ್ಲಿ ನಿಮರ್ಿಸಲಾಗಿರುವ ಚಾವುಂಡರಾಯ ಸಭಾಮಂಟಪದಲ್ಲಿಕ್ಕೆ ಆಗಮಿಸಿದ ರಾಷ್ಟ್ರಪತಿ ಕೋವಿಂದ್ ಅವರು, ದೀಪ ಬೆಳಗಿಸುವುದರ ಮೂಲಕ ಮಹಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ  ವೇಳೆ ಕೋವಿಂದ್ ಅವರ ಪತ್ನಿ ಸರಿತಾ ಅವರು ಕೂಡ ಜೊತೆಯಲ್ಲಿದ್ದರು.
   ಇನ್ನು ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ವಜುಬಾಯಿ ವಾಲ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಸಚಿವ ಎ.ಮಂಜು ಹಾಗೂ ಧರ್ಮಸ್ಥಳದ ಧಮರ್ಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು  ಭಾಗವಹಿಸಿದ್ದಾರೆ.
   12 ವರ್ಷಕ್ಕೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ ಕಾರ್ಯಕ್ರಮ ಕಣ್ತುಂಬಿಕೊಳ್ಳಲು ನೂರಕ್ಕೂ ಹೆಚ್ಚು ದಿಂಗಂಬರ ಮುನಿಗಳು, ಆಚಾರ್ಯರು ಮತ್ತು ಮಾತಾಜಿಯವರು ಭಾಗಿಯಾಗಿದ್ದರು. ಕಾರ್ಯಕ್ರಮಕ್ಕಾಗಿ ಪಂಚಕಲ್ಯಾಣ  ನಗರದಲ್ಲಿ 3.5 ಕೋಟಿ ರೂ. ವೆಚ್ಚದಲ್ಲಿ ಚಾವುಂಡರಾಯ ಸಭಾಮಂಟಪ ನಿಮರ್ಾಣ ಮಾಡಲಾಗಿದ್ದು, ಇಲ್ಲಿ ಒಟ್ಟು 1800 ಆಸನ ವ್ಯವಸ್ಥೆ ಮಾಡಲಾಗಿದೆ.

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries