HEALTH TIPS

No title

                  ದೇಲಂಪಾಡಿ : ಶಿವರಾತ್ರಿ ಮಹೋತ್ಸವ
   ಕುಂಬಳೆ: ಇಲ್ಲಿನ ಇತಿಹಾಸ ಪ್ರಸಿದ್ಧ ದೇಲಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಮಹೋತ್ಸವದ ಪ್ರಯುಕ್ತ ಧಾಮರ್ಿಕ ಸ ನಡೆಯಿತು.
   ಕ್ಷೇತ್ರ ಆಡಳಿತ ಮೊಕ್ತೇಸರ ನ್ಯಾಯವಾದಿ ಬಿ.ಸುಬ್ಬಯ್ಯ ರೈ ಸಮಾರಂಭದ ಅಧ್ಯಕ್ಷತೆ ವಹಿಸಿದರು. ಈ ಸಂದರ್ಭದಲ್ಲಿ ಧಾಮರ್ಿಕ ಭಾಷಣ ಮಾಡಿದ ಹಿರಿಯ ಪತ್ರಕರ್ತ ವೀಜಿ ಕಾಸರಗೋಡು ಶಿವನ ಆರಾಧನಾ ರೀತಿ ಹಾಗೂ ಶಿವರಾತ್ರಿಯ ಮಹತ್ವದ ಬಗ್ಗೆ ವಿವರಿಸಿದರು.
   ಮುಖ್ಯ ಅತಿಥಿಗಳಾಗಿ ಎಡನಾಡು - ಕಣ್ಣೂರು ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಚ್.ಶಿವರಾಮ ಭಟ್ ಮಾತನಾಡಿ ದೇಲಂಪಾಡಿ ಪ್ರದೇಶದ ಕಾರ್ಯಕರ್ತರ ನಿಸ್ವಾರ್ಥ ಸೇವೆಯನ್ನು ಪ್ರಶಂಸಿಸಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಕಾರ್ಯಕರ್ತರ ಹಾಗೂ ಭಕ್ತಾದಿಗಳ ಸೇವೆ ಅತ್ಯಂತ ಮಹತ್ವದ ಪಾತ್ರವಹಿಸಿದೆ ಎಂದು ಅಭಿಪ್ರಾಯಪಟ್ಟರು. ಸಾಮಾಜಿಕ ಕಾರ್ಯಕರ್ತರಾದ ಗಣೇಶ್ ಭಂಡಾರಿ ಕುತ್ತಿಕ್ಕಾರು, ಪುತ್ತಿಗೆ ಗ್ರಾಮ ಪಂಚಾಯತು ಸದಸ್ಯ ಎಂ.ಕೆ.ಆನಂದ, ಕ್ಷೇತ್ರ ಗುರಿಕಾರರಾದ ಶ್ಯಾಮರಾಯ ಹೊಳ್ಳ, ಕ್ಷೇತ್ರ ಸೇವಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಡಿ.ದಾಮೋದರ ರಾವ್ ಮೊದಲಾದವರು ಮಾತನಾಡಿದರು. ಆಡಳಿತ ಸಮಿತಿಯ ಹಿರಿಯ ಸದಸ್ಯ ತಿಮ್ಮಣ್ಣ ರೈ ನೈಮೊಗರು, ಅಮರನಾಥ ರೈ, ಸೇವಾ ಸಮಿತಿ ಕೋಶಾಧಿಕಾರಿ ಸುರೇಂದ್ರ ರೈ ಕಮ್ಮಂತಿಲ, ಡಿ.ಸುಬ್ಬಣ್ಣ ಆಳ್ವ ಮೊದಲಾದವರು ಉಪಸ್ಥಿತರಿದ್ದರು.
   ಮಂಗಳೂರು ವಿಶ್ವವಿದ್ಯಾಲಯದ ಎಂ.ಸಿ.ಎ. ಸ್ನಾತಕೋತ್ತರ ಪರೀಕ್ಷೆಯಲ್ಲಿ ದ್ವಿತೀಯ ರ್ಯಾಂಕ್ ಪಡೆದ ಜೇಶ್ಮ ದೇಲಂಪಾಡಿ ಅವರನ್ನು ಈ ಸಂದರ್ಭದಲ್ಲಿ ಸಮ್ಮಾನಿಸಲಾಯಿತು.
  ಸೇವಾ ಸಮಿತಿ ಅಧ್ಯಕ್ಷ ಎಂ.ಶಂಕರ ರೈ ಮಾಸ್ಟರ್ ಸ್ವಾಗತಿಸಿ, ಕಾರ್ಯದಶರ್ಿ ಎ.ಡಿ.ಕೊರಗಪ್ಪ ವಂದಿಸಿದರು. ಡಿ.ರಾಜೇಂದ್ರ ರೈ ಕಾರ್ಯಕ್ರಮ ನಿರೂಪಿಸಿದರು.
 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries