HEALTH TIPS

No title

                ತಾಳ್ಮೆ, ಏಕಾಗ್ರತೆಗಳೇ ನೆನಪಿಗೆ ಶಕ್ತಿ : ಗಿರೀಶ್
    ಪೆರ್ಲ: ವಿದ್ಯಾಥರ್ಿಗಳಲ್ಲಿ ತಾಳ್ಮೆ, ಏಕಾಗ್ರತೆಗಳಿದ್ದಾಗ ಮಾತ್ರ ನೆನಪಿನ ಶಕ್ತಿ ಹೆಚ್ಚುವುದು ಎಂದು ಕಸ್ತೂಬರ್ಾ ಮೆಡಿಕಲ್ ಕಾಲೇಜಿನ ಕೌನ್ಸಿಲರ್ ಗಿರೀಶ್ ಅವರು ಹೇಳಿದರು.
ಅವರು ಪೆರ್ಲ ನಾಲಂದ ಕಾಲೇಜಿನ ಪ್ಲೇಸ್ಮೆಂಟ್ ಸೆಲ್ನ ವತಿಯಲ್ಲಿ `ಪರೀಕ್ಷಾ ತಯಾರಿ ಮತ್ತು ನೆನಪಿನ ಶಕ್ತಿ' ಎಂಬ ವಿಷಯದ ಬಗೆಗೆ ಒಂದು ದಿನದ ಕಾಯರ್ಾಗಾರವನ್ನು ಗುರುವಾರ  ನಡೆಸಿಕೊಟ್ಟರು.
   ನಮ್ಮಲ್ಲಿ ಅದ್ಭುತ ಶಕ್ತಿ ಅಡಗಿರುತ್ತದೆ. ಅದನ್ನು ನಾವು ಅರಿತಿರುವುದಿಲ್ಲ. ಇಂದಿನ ಸ್ಪಧರ್ಾತ್ಮಕ ಬದುಕಿನಲ್ಲಿ ಸದಾ ಭಾನಾತ್ಮಕ ಚಿಂತನೆಯನ್ನು ಮಾಡುತ್ತ ಸಾಗಿದರೆ ಎಲ್ಲ ಕಡೆಗಳಲ್ಲಿ ಗೆಲ್ಲುತ್ತೇವೆ, ನಮ್ಮಲ್ಲಿ ಋಣಾತ್ಮಕ ಚಿಂತನೆಗಳು ಬಂದಾಗ ಸೋಲುತ್ತೇವೆ ಎಂದರು. ಇದರ ಜೊತೆಗೆ ಹಿತಮಿತವಾದ ಸಾತ್ವಿಕ ಆಹಾರವನ್ನು ಸೇವಿಸಿದರೆ ಮನಸ್ಸು ಲವಲವಿಕೆಯಿಂದಿರುತ್ತದೆ. ನೋಡಿ, ಕೇಳಿ, ಆಡಿ ಕಲಿತುಕೊಳ್ಳುವುದು ಮನಸ್ಸಿನಲ್ಲಿ ಗಟ್ಟಿಯಾಗಿರುತ್ತದೆ. ಪರೀಕ್ಷೆಯ ಸಂದರ್ಭದಲ್ಲಿ ಆರೋಗ್ಯ ಕಾಯ್ದುಕೊಳ್ಳುವುದು ಅತೀ ಅಗತ್ಯ. ಅದು ಮನಸ್ಸಿನ ಮೇಲೆ ಪರಿಣಾಮ ಬೀರುತ್ತದೆ ಎಂದರು.
   ಕಾಲೇಜಿನ ಪ್ರಾಂಶುಪಾಲ ಡಾ.ವಿಘ್ನೇಶ್ವರ ವಮರ್ುಡಿ ಅಧ್ಯಕ್ಷತೆಯನ್ನು ವಹಿಸಿದರು. ಉಪನ್ಯಾಸಕ ಸುರೇಶ್ ಕುಂಟಿಕಾನ ಸ್ವಾಗತಿಸಿ, ವಿದ್ಯಾಥರ್ಿನಿ ಅನುಷ ಪ್ರಾಥರ್ಿಸಿ, ವಿದ್ಯಾಥರ್ಿ ಅಭಿಲಾಷ್ ವಂದಿಸಿದರು. ಕಾಲೇಜಿನ ಎಲ್ಲ ಉಪನ್ಯಾಸಕ, ಉಪನ್ಯಾಸಕಿಯರು, ವಿದ್ಯಾಥರ್ಿಗಳು ಭಾಗವಹಿಸಿದರು.
 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries