HEALTH TIPS

No title

           ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
   ಬದಿಯಡ್ಕ : ಶ್ರೀ ಸದಾಶಿವ ಕ್ಷೇತ್ರ ಮುನಿಯೂರು ಬೊಳ್ಳೂರು ಇದರ ಬ್ರಹ್ಮಕಲಶ ಮಹೋತ್ಸವವು ಎಪ್ರಿಲ್ 4ರಿಂದ 12ರ ತನಕ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿರುವುದು. ಆ ಪ್ರಯುಕ್ತ ಭಾನುವಾರ ಶ್ರೀ ಕ್ಷೇತ್ರದಲ್ಲಿ ದೇವರಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ವಸಂತ ಪೈ ಬದಿಯಡ್ಕ ಮಾತನಾಡುತ್ತಾ ಆಡಂಭರದ ಖಚರ್ು ವೆಚ್ಚಗಳನ್ನು ನಿಯಂತ್ರಣದಲ್ಲಿಡುವಲ್ಲಿ ಎಲ್ಲರೂ ಸಹಕರಿಸಿ, ಸರಳ ರೀತಿಯಲ್ಲಿ ಬ್ರಹ್ಮಕಲಶ ಮಹೋತ್ಸವವನ್ನು ನಡೆಸಿ ಎಲ್ಲರಿಗೂ ಮಾದರಿಯಾಗಬೇಕು. ಒಗ್ಗಟ್ಟಿನ ಪರಿಶ್ರಮವನ್ನು ಭಕ್ತಿಯಿಂದ ದೇವರಿಗೆ ಅಪರ್ಿಸಬೇಕಾಗಿದ್ದು, ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆಯಿತ್ತರು.
ಕ್ಷೇತ್ರದ ಆನುವಂಶಿಕ ಮೊಕ್ತೇಸರ ಗೋಪಾಲಕೃಷ್ಣ ನಡುವಂತಿಲ್ಲಾಯ, ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷ ಶಂಕರನಾರಾಯಣ ಮಯ್ಯ ಬದಿಯಡ್ಕ, ವಾಡರ್ು ಸದಸ್ಯ ಬಾಲಕೃಷ್ಣ ಶೆಟ್ಟಿ, ವಿವಿಧ ಸಮಿತಿಯ ಪದಾಧಿಕಾರಿಗಳು ಹಾಗೂ ಊರಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.
ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದಶರ್ಿ ಶ್ರೀನಿವಾಸ ಮುನಿಯೂರು ಸ್ವಾಗತಿಸಿ, ಕೋಶಾಧಿಕಾರಿ ಉಮೇಶ ರೈ ವಂದಿಸಿದರು.
 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries