HEALTH TIPS

No title

               ಕಿಳಿಂಗಾರು ಶಾಲಾ  80 ನೇ ವಾಷರ್ಿಕೋತ್ಸವ
  ಬದಿಯಡ್ಕ: ಕಿಳಿಂಗಾರು ಅನುದಾನಿತ ಕಿರಿಯ ಪ್ರಾಥಮಿಕ ಶಾಲೆಯ 80ನೇ ವಾಷರ್ಿಕೋತ್ಸವವು ವಿವಿಧ ಕಾರ್ಯಕ್ರಮಗಳೊಂದಿಗೆ ಶನಿವಾರ ಜರಗಿತು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪದ್ಮನಾಭ ರೈ ಬಂಡ್ರಡ್ಕ ಧ್ವಜಾರೋಹಣಗೈದು ವಾಷರ್ಿಕೋತ್ಸವಕ್ಕೆ ಚಾಲನೆ ನೀಡಿದರು. 
   ಶಾಲಾ ವಾಷರ್ಿಕೋತ್ಸವದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮವನ್ನು ಬದಿಯಡ್ಕ ಗ್ರಾಮ ಪಂಚಾಯತು ಅಧ್ಯಕ್ಷರೂ ,ಕಿಳಿಂಗಾರು ಶಾಲಾ ವ್ಯವಸ್ಥಾಪಕರೂ ಆದ ಕೆ. ಎನ್ ಕೃಷ್ಣ ಭಟ್ ಉದ್ಘಾಟಿಸಿದರು. ಬದಿಯಡ್ಕ ಗ್ರಾಮ ಪಂಚಾಯತು ಸದಸ್ಯ ಶಂಕರ ಡಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಕೈಲಾಸಮೂತರ್ಿ  ವಿವಿಧ ಸ್ಪಧರ್ೆಗಳಲ್ಲಿ ವಿಜೇತರಾದ ವಿದ್ಯಾಥರ್ಿಗಳಿಗೆ ಬಹುಮಾನ ವಿತರಿಸಿದರು. ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಸುಬ್ರಾಯ ಭಟ್, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಪದ್ಮನಾಭ ರೈ, ಮಾತೃ ಸಂಘದ ಅಧ್ಯಕ್ಷೆ ಭಾರತಿ ನಿಡುಗಳ ಶುಭಾಶಂಸನೆಗೈದರು.ಶಾಲಾ ವಿದ್ಯಾಥರ್ಿ, ವಿದ್ಯಾಥರ್ಿನಿಯವರಿಂದ ಹಾಗೂ ಹಳೆ ವಿದ್ಯಾಥರ್ಿಗಳಿಂದ ವಿವಿಧ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮಗಳು ಜರಗಿತು. ಶಾಲೆಗೆ ಶಾಶ್ವತ ನಾಮ ಫಲಕ ಹಾಗೂ ಸೀಲಿಂಗ್ ಫ್ಯಾನನ್ನು ಯುವ ಉದ್ಯಮಿ ಪ್ರಶಾಂತ್ ಶೆಟ್ಟಿ ಬೇಳ ಈ ಸಂದರ್ಭದಲ್ಲಿ ನೀಡಿದರು.
ಶಾಲಾ ಮುಖ್ಯೋಪಾಧ್ಯಾಯ ಕೆ.ರಾಮಕೃಷ್ಣ ಭಟ್ ಸ್ವಾಗತಿಸಿ, ವರದಿ ವಾಚಿಸಿದರು. ಶಾಲಾ ಅಧ್ಯಾಪಿಕೆ ಮಧುಮತಿ ಎ ವಂದಿಸಿದರು. ಶಾಲಾ ಅಧ್ಯಾಪಿಕೆ ಶ್ರೀವಿದ್ಯಾ , ಅಧ್ಯಾಪಕ ಪ್ರದೀಪ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
 



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries