ವ್ಯಾಪಾರಿ ಸಮಿತಿಯಿಂದ ಮಹಿಳಾ ದಿನಾಚರಣೆ
ಮುಳ್ಳೇರಿಯ: ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಮುಳ್ಳೇರಿಯ ಶಾಖೆಯ ಮಹಿಳಾ ಘಟಕದ ವತಿಯಿಂದ ಗುರುವಾರ ವಿವಿಧ ಕಾರ್ಯಕ್ರಮ ನಡೆಸಲಾಯಿತು.
ವ್ಯಾಪಾರಿ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಮುಳ್ಳೇರಿಯ ಶಾಖೆಯ ಅಧ್ಯಕ್ಷ ಬಾಲಕೃಷ್ಣ ರೈ ಉದ್ಘಾಟಿಸಿದರು. ಕಾರ್ಯಕ್ರಮದ ಅಂಗವಾಗಿ ಕ್ಯಾನ್ಸರ್ ಬೋಧನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮುಳ್ಳೇರಿಯ ಕುಟುಂಬ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿ ಕೆ. ಸುರೇಶ್ ಕುಮಾರ್ ತರಗತಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಅತ್ಯುತ್ತಮ ಸೀಡ್ ಅಧ್ಯಾಪಿಕೆಯಾಗಿ ಪುರಸ್ಕೃತರಾದ ಮುಳ್ಳೇರಿಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಾವಿತ್ರಿ ಟೀಚರ್ ಅವರನ್ನು ಗೌರವಿಸಲಾಯಿತು.
ಮುಳ್ಳೇರಿಯ: ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಮುಳ್ಳೇರಿಯ ಶಾಖೆಯ ಮಹಿಳಾ ಘಟಕದ ವತಿಯಿಂದ ಗುರುವಾರ ವಿವಿಧ ಕಾರ್ಯಕ್ರಮ ನಡೆಸಲಾಯಿತು.
ವ್ಯಾಪಾರಿ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಮುಳ್ಳೇರಿಯ ಶಾಖೆಯ ಅಧ್ಯಕ್ಷ ಬಾಲಕೃಷ್ಣ ರೈ ಉದ್ಘಾಟಿಸಿದರು. ಕಾರ್ಯಕ್ರಮದ ಅಂಗವಾಗಿ ಕ್ಯಾನ್ಸರ್ ಬೋಧನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಮುಳ್ಳೇರಿಯ ಕುಟುಂಬ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿ ಕೆ. ಸುರೇಶ್ ಕುಮಾರ್ ತರಗತಿ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಅತ್ಯುತ್ತಮ ಸೀಡ್ ಅಧ್ಯಾಪಿಕೆಯಾಗಿ ಪುರಸ್ಕೃತರಾದ ಮುಳ್ಳೇರಿಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಾವಿತ್ರಿ ಟೀಚರ್ ಅವರನ್ನು ಗೌರವಿಸಲಾಯಿತು.