HEALTH TIPS

No title

                   ಕಣ್ಣೂರಿನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ವಿರೂಪ
     ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯ ತಳಿಪರಂಬದಲ್ಲಿ ಮಹಾತ್ಮ ಗಾಂಧಿ ಪುತ್ಥಳಿಯನ್ನು ದುಷ್ಕಮರ್ಿಗಳು ಭಗ್ನಗೊಳಿಸಿದ್ದಾಗಿ ಗುರುವಾರ ಪೊಲೀಸರು ಮಾಹಿತಿ ನೀಡಿದ್ದಾರೆ.
   ತ್ರಿಪುರಾದಲ್ಲಿ ಲೆನಿನ್ನ ಪ್ರತಿಮೆಗಳನ್ನು ಧ್ವಂಸಗೊಳಿಸಿದ ಬೆನ್ನಲೇ ದೇಶದ ವಿವಿಧ ಭಾಗಗಳಲ್ಲಿ ಅನೇಕ ಮುಖಂಡರ ಪ್ರತಿಮೆಗಳನ್ನು ಭಗ್ನ ಮಾಡಿರುವ ಬಗ್ಗೆ ವರದಿಯಾಗಿದೆ. ತಳಿಪರಂಬದ ತಾಲ್ಲೂಕು ಕಚೇರಿ ಎದುರಿನ ಗಾಂಧಿ ಪ್ರತಿಮೆ ಮೇಲೆ ದುಷ್ಕಮರ್ಿಗಳು ಕಲ್ಲು ಮತ್ತು ಬಾಟಲಿಗಳನ್ನು ಎಸೆದಿದ್ದು, ಪ್ರತಿಮೆಯ ಕನ್ನಡಕ ಮತ್ತು ಹಾರಕ್ಕೆ ಹಾನಿಯಾಗಿದೆ. ಗುರುವಾರ ಬೆಳಿಗ್ಗೆ ಈ ಕುಕೃತ್ಯ ಗುರುತಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
  ತಾಲ್ಲೂಕು ಕಚೇರಿ ಸಮೀಪದ ಸಿಸಿಟಿವಿಗಳಲ್ಲಿ ದಾಖಲಾಗಿರುವ ದೃಶ್ಯಗಳಲ್ಲಿ ಒಬ್ಬ ವ್ಯಕ್ತಿಯನ್ನು ಗುರುತಿಸಲಾಗಿದೆ. 2005ರಲ್ಲಿ ಮಾಜಿ ಮುಖ್ಯಮಂತ್ರಿ ಓಮನ್ ಚಾಂಡಿ ಅನಾವರಣಗೊಳಿಸಿದ್ದ ಗಾಂಧಿ ಪ್ರತಿಮೆ ಭಗ್ನಗೊಳಿಸಿರುವುದನ್ನು ಎಲ್ಲ ರಾಜಕೀಯ ಪಕ್ಷಗಳು ಖಂಡಿಸಿವೆ.
   ಸೋಮವಾರದಿಂದ ಮೂರು ದಿನಗಳಲ್ಲಿ ಉತ್ತರ ಪ್ರದೇಶದ ಮೀರಠ್ನ ಮವಾನ್ ಖುದರ್್ನಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪುತ್ಥಳಿ, ಕೋಲ್ಕತ್ತದ ಕಾಳಿಘಾಟ್ನಲ್ಲಿದ್ದ ಜನಸಂಘದ ಸ್ಥಾಪಕ ಶ್ಯಾಮ್ ಪ್ರಸಾದ್ ಮುಖಜರ್ಿ ಪುತ್ಥಳಿ, ವೆಲ್ಲೂರ್ ಜಿಲ್ಲೆಯ ತಿರುಪತ್ತೂರು ನಗರ ಪಾಲಿಕೆ ಆವರಣದಲ್ಲಿದ್ದ ಪೆರಿಯಾರ್ ರಾಮಸ್ವಾಮಿ ಅವರ ಪುತ್ಥಳಿ ಹಾಗೂ ತ್ರಿಪುರದಲ್ಲಿ ಲೆನಿನ್ ಪ್ರತಿಮೆ ಧ್ವಂಸಗೊಳಿಸಿರುವುದು ವರದಿಯಾಗಿದೆ.
     ಕೇರಳದಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ವಿರೂಪಗೊಳಿಸಿದ್ದ ದುಷ್ಕಮರ್ಿಯ ಬಂಧನ
    ಕಣ್ಣೂರು ಜಿಲ್ಲೆಯ ತಳಿಪರಂಬದಲ್ಲಿ ಮಹಾತ್ಮ ಗಾಂಧಿ ಪುತ್ಥಳಿಯನ್ನು ಭಗ್ನಗೊಳಿಸಿದ್ದ ದುಷ್ಕಮರ್ಿಯನ್ನು ಪೊಲೀಸರು ಬಂಧಿಸಿದ್ದಾರೆ.
   ಬಂಧಿತ ಆರೋಪಿ ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದೆ. ಈ ಘಟನೆಯಲ್ಲಿ ಯಾವುದೇ ರಾಜಕೀಯ ಹುನ್ನಾರ ಇರುವುದನ್ನು ಪೊಲೀಸರು ತಳ್ಳಿ ಹಾಕಿದ್ದಾರೆ.
 ತಳಿಪರಂಬದ ತಾಲ್ಲೂಕು ಕಚೇರಿ ಎದುರಿನ ಗಾಂಧಿ ಪ್ರತಿಮೆ ಮೇಲೆ ಕಲ್ಲು ಮತ್ತು ಬಾಟಲಿಗಳನ್ನು ಎಸೆದ ಪರಿಣಾಮ ಪ್ರತಿಮೆಯ ಕನ್ನಡಕ ಮತ್ತು ಹಾರಕ್ಕೆ ಹಾನಿಯಾಗಿದೆ. ತಾಲ್ಲೂಕು ಕಚೇರಿ ಸಮೀಪದ ಸಿಸಿಟಿವಿಗಳಲ್ಲಿ ದಾಖಲಾಗಿರುವ ದೃಶ್ಯಗಳಲ್ಲಿ ಒಬ್ಬ ವ್ಯಕ್ತಿಯನ್ನು ಗುರುತಿಸಲಾಗಿತ್ತು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries