HEALTH TIPS

No title

                   ಹರಿಕಥಾ ಅಭಿಯಾನ
             ಮೇ 12 ರಂದು ಕೊಂಡೆವೂರು ಶ್ರೀಗಳಿಂದ ಚಾಲನೆ 
    ಕಾಸರಗೋಡು: ಷಷ್ಟ್ಯಬ್ದ ಆಚರಿಸುವ ಖ್ಯಾತ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ ಅವರು ನಡೆಸುವ ಹರಿಕಥಾ ಅಭಿಯಾನ ಮೇ 12 ರಂದು ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಆರಂಭಗೊಳ್ಳಲಿದೆ.
   ಅಂದು ಬೆಳಗ್ಗೆ 10 ರಿಂದ ಸಂಜೆ 3.30 ರ ವರೆಗೆ ಹರಿದಾಸ್ ಜಯಾನಂದರಿಂದ ತರಬೇತುಗೊಂಡ ಭಜನಾ ತಂಡದಿಂದ ಭಜನೆ, 4 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯುವುದು.
    ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರು ಉದ್ಘಾಟಿಸಿ ಆಶೀರ್ವದಿಸುವರು. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದ ನಿದರ್ೇಶಕ ಜಯರಾಮ ನೆಲ್ಲಿತ್ತಾಯ ಅಧ್ಯಕ್ಷತೆ ವಹಿಸುವರು. ಅಭಿನಂದನಾ ಸಮಿತಿ ಗೌರವಾಧ್ಯಕ್ಷ ಡಾ.ಶ್ರೀಧರ ಭಟ್, ಕ.ಸಾ.ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು, ಧಾಮರ್ಿಕ ಮುಂದಾಳು ವಸಂತ ಪೈ, ಐಲ ಶ್ರೀ ದುಗರ್ಾಪರಮೇಶ್ವರೀ ಕ್ಷೇತ್ರ ಆಡಳಿತ ಮೊಕ್ತೇಸರ ನಾರಾಯಣ ಹೆಗ್ಡೆ ಕೋಡಿಬೈಲು, ರಂಗಚಿನ್ನಾರಿ ನಿದರ್ೇಶಕ ಕಾಸರಗೋಡು ಚಿನ್ನಾ, ವಿಶ್ವ ಹಿಂದೂ ಪರಿಷತ್ ಮಾತೃ ಮಂಡಳಿಯ ಮೀರಾ ಆಳ್ವ, ಉದ್ಯಮಿ ರಾಮ್ ಪ್ರಸಾದ್ ಕಾಸರಗೋಡು ಶುಭಹಾರೈಸುವರು. ಹಿರಿಯ ಪತ್ರಕರ್ತ ರಾಧಾಕೃಷ್ಣ ಕೆ.ಉಳಿಯತ್ತಡ್ಕ, ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಅಧ್ಯಕ್ಷ ಶಿವರಾಮ ಕಾಸರಗೋಡು, ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ ಉಪಸ್ಥಿತರಿರುವರು.
     

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries