ಸಮರಸ ಚಿತ್ರ ಸುದ್ದಿ: ಉಪ್ಪಳ: ಕ್ಯಾಂಪ್ಕೊ ಬಾಯಾರು ಶಾಖೆಯ ಸದಸ್ಯ ವಿಷ್ಣು ಭಟ್ ಅವರಿಗೆ ತೆರೆದ ಹೃದಯ ಶಸ್ತ್ರಚಿಕಿತ್ಸೆಗಾಗಿ ಕ್ಯಾಂಪ್ಕೊದ " ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೊ ಚಿತ್ತ" ಯೋಜನೆ ವತಿಯಿಂದ 50 ಸಾವಿರ ರೂ. ಮೊತ್ತದ ಸಹಾಯಧನದ ಚೆಕ್ ನ್ನು ಕ್ಯಾಂಪ್ಕೊ ಉಪಾಧ್ಯಕ್ಷ ಶಂ.ನಾ. ಖಂಡಿಗೆ, ವಿಷ್ಣುಭಟ್ ಅವರಿಗೆ ಹಸ್ತಾಂತರಿಸಿದರು. ಸಂಸ್ಥೆಯ ನಿರ್ದೇಶಕರಾದ ಸತೀಶ್ಚಂದ್ರ ಭಂಡಾರಿ, ಬಾಲಕೃಷ್ಣ ರೈ, ವಲಯ ಪ್ರಬಂಧಕ ಪ್ರದೀಪ್ ಕುಮಾರ್, ಬಾಯಾರು ಶಾಖಾ ವ್ಯವಸ್ಥಾಪಕರು ಉಪಸ್ಥಿತರಿದ್ದರು.