HEALTH TIPS

ಶ್ರೀಕೃಷ್ಣ ಜನ್ಮಸ್ಥಾನದಲ್ಲಿ ಮಸೀದಿಗೆ ವಿರೋಧ: ಅರ್ಜಿ ವಿಚಾರಣೆಗೆ ಒಪ್ಪಿಗೆ

Top Post Ad

Click to join Samarasasudhi Official Whatsapp Group

Qries

       ನವದೆಹಲಿ: ಶ್ರೀಕೃಷ್ಣ ಜನ್ಮಭೂಮಿ ದೇವಸ್ಥಾನದ ಆವರಣದಲ್ಲಿರುವ 17ನೇ ಶತಮಾನದ ಮಸೀದಿಯನ್ನು ತೆರವುಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ಮಥುರಾದ ನ್ಯಾಯಾಲಯವೊಂದು ವಿಚಾರಣೆಗೆ ಪರಿಗಣಿಸಿದೆ.

        ಶಹಿ ಈದ್ಗಾ ಮಸೀದಿ ಟ್ರಸ್ಟ್, ಸುನ್ನಿ ವಕ್ಫ್ ಮಂಡಳಿ ಸೇರಿದಂತೆ ಎಲ್ಲ ಸಂಬಂಧಿತ ಕಕ್ಷಿದಾರರಿಗೂ ನೋಟಿಸ್ ನೀಡಿರುವ ನ್ಯಾಯಾಲಯವು, ನವೆಂಬರ್ 18ರಂದು ಹಾಜರಾಗುವಂತೆ ಸೂಚನೆ ನೀಡಿದೆ.

        ಕಳೆದ ತಿಂಗಳು ಕೆಲವು ಜನರ ತಂಡವೊಂದು ಮಥುರಾದ ಹಿರಿಯ ವಿಭಾಗೀಯ ಸಿವಿಲ್ ನ್ಯಾಯಾಧೀಶರಿಗೆ ಅರ್ಜಿ ಸಲ್ಲಿಸಿತ್ತು. ಶ್ರೀಕೃಷ್ಣನ ಜನ್ಮಸ್ಥಳದಲ್ಲಿ, ಕಾತ್ರ ಕೇಶವ ದೇವ ದೇವಸ್ಥಾನದ 13.37 ಎಕರೆ ಪ್ರದೇಶದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಆರೋಪಿಸಿದ್ದರು. ಈ ಅರ್ಜಿಯನ್ನು ಸೆ. 30ರಂದು ಹಿರಿಯ ವಿಭಾಗೀಯ ಸಿವಿಲ್ ನ್ಯಾಯಾಧೀಶರು ವಜಾಗೊಳಿಸಿದ್ದರು. ಈ ಆದೇಶವು ವಾಸ್ತವಕ್ಕೆ ವಿರುದ್ಧ ಹಾಗೂ ತಪ್ಪಾದ ಅಂಶಗಳನ್ನು ಒಳಗೊಂಡಿದೆ ಎಂದು ಅಕ್ಟೋಬರ್ 12ರಂದು ಜಿಲ್ಲಾ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

      ಕೆಳ ನ್ಯಾಯಾಲಯದ ದಾಖಲೆಗನ್ನು ಪಡೆದುಕೊಂಡ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸುಧಾನ ಠಾಕೂರ್, ಶುಕ್ರವಾರ ಈ ಅರ್ಜಿಯನ್ನು ಪರಿಗಣಿಸಲು ಒಪ್ಪಿದರು.

         ಬಾಲ ಭಕ್ತ ಭಗವಾನ್ ಶ್ರೀಕೃಷ್ಣ ವಿರಾಜಮಾನ್ ಅವರ ಪರವಾಗಿ ರಂಜನಾ ಅಗ್ನಿಹೋತ್ರಿ ಮತ್ತು ಇತರರು 'ನಂತರದ ಸ್ನೇಹಿತರ' ಮೂಲಕ ಈ ಅರ್ಜಿ ಸಲ್ಲಿಸಲಾಗಿದೆ. ವ್ಯಕ್ತಿಯೊಬ್ಬರು ನೇರವಾಗಿ ಅರ್ಜಿಯೊಂದನ್ನು ನಿಭಾಯಿಸಲು ಸಾಧ್ಯವಾಗದ ಸಂದರ್ಭದಲ್ಲಿ ಅವರನ್ನು ಪ್ರತಿನಿಧಿಸುವವರನ್ನು ಕಾನೂನಿನ ಪರಿಭಾಷೆಯಲ್ಲಿ 'ನಂತರದ ಸ್ನೇಹಿತ' ಎಂದು ಉಲ್ಲೇಖಿಸಲಾಗುತ್ತದೆ.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries