ಕಾಸರಗೋಡು: ಜಿಲ್ಲೆಯಾದ್ಯಂತ ದೇವಸ್ಥಾನ, ಮಠ, ಮಂದಿರ, ತರವಾಡು ಮನೆ ಮೊದಲಾದೆಡೆಗಳಲ್ಲಿ ನವರಾತ್ರಿ ಮಹೋತ್ಸವ ಶನಿವಾರ ಆರಂಭಗೊಂಡಿತು.
ಕಾಸರಗೋಡು ನಗರದ ಕೊರಕ್ಕೋಡು ಆರ್ಯಕಾತ್ಯಾಯಿನಿ ಶ್ರೀ ಮಹಾದೇವಿ ದೇವಸ್ಥಾನದಲ್ಲಿ ಶನಿವಾರ ಪೂರ್ವಾಹ್ನ ಭಂಡಾರ ಮನೆಯಿಂದ ಭಂಡಾರ ಆಗಮನ, ಉತ್ಸವ ಆರಂಭ, ಬ್ರಹ್ಮಶ್ರೀ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ಅವರ ನೇತೃತ್ವದಲ್ಲಿ ಶುದ್ಧಿಕಲಶ, ಚಂಡಿಕಾ ಹೋಮ, ಮಹಾಪೂಜೆ, ದರ್ಶನದೊಂದಿಗೆ ನವರಾತ್ರಿ ಮಹೋತ್ಸವ ಆರಂಭಗೊಂಡಿತು.
ಕೋಟೆಕಣಿ ಸಪರಿವಾರ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಗಣಪತಿ ಹೋಮದೊಂದಿಗೆ ನವರಾತ್ರಿ ಮಹೋತ್ಸವ ಆರಂಭಗೊಂಡಿತು.
ಕೊರಕೋಡು ಶ್ರೀ ದುರ್ಗಾಪರಮೇಶ್ವರೀ ಮಹಾಕಾಳೀ ಕಾಶೀ ಕಾಲಭೈರವೇಶ್ವರ ದೇವಸ್ಥಾನ, ಕಾರ್ಲೆ ಶ್ರೀ ಕಾಳಿಕಾಂಬಾ, ಬಂದಡ್ಕ ಶ್ರೀ ರಾಮನಾಥ ದೇವಸ್ಥಾನ, ಪಾಂಗೋಡು ಶ್ರೀ ಕ್ಷೇತ್ರ, ಮಲ್ಲ ಶೀ ದುರ್ಗಾಪರಮೇಶ್ವರಿ ದೇವಸ್ಥಾನ, ಕೂಡ್ಲು ಮಾರಿಗುಡಿ ದೇವಸ್ಥಾನ ಮೊದಲಾದ ದೇವಸ್ಥಾನಗಳಲ್ಲಿ ನವರಾತ್ರಿ ಮಹೋತ್ಸವ ಕೋವಿಡ್ ಮಾನದಂಡದಂತೆ ನಡೆಯುತ್ತಿದೆ.
ಕಾಸರಗೋಡು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭದಿಂದ ಮುಕ್ತಾಯದ ತನಕ ಬೆಳಗಲಿರುವ ನಂದಾ ದೀಪವನ್ನು ಶ್ರೀ ಕ್ಷೇತ್ರದ ತಂತ್ರಿವರ್ಯರೂ, ಮೊಕ್ತೇಸರರೂ ಆಗಿರುವ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅವರು ದೀಪ ಬೆಳಗಿಸಿ ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರದೊಳಗಿನ ಪೂಜಾ ಕಾರ್ಯಕ್ರಮಗಳು ಮಾತ್ರವೇ ಜರಗಲಿದೆ. ಅನ್ನಸಂತರ್ಪಣೆ, ಸಾಂಸ್ಕøತಿಕ ಕಾರ್ಯಕ್ರಮಗಳು, ಜಾತ್ರೋತ್ಸವ, ಶ್ರೀ ದೇವರ ಪೇಟೆ ಸವಾರಿ, ಅಶ್ವತ್ಥ ಕಟ್ಟೆ ಪೂಜೆಗಳೆಲ್ಲವನ್ನೂ ರದ್ದುಗೊಳಿಸಲಾಗಿದೆ.
(ಚಿತ್ರ ಮಾಹಿತಿ ಕೊರಕ್ಕೋಡು ಆರ್ಯಕಾತ್ಯಾಯಿನಿ ಶ್ರೀ ಮಹಾದೇವಿ ದೇವಸ್ಥಾನದಲ್ಲಿ ಚಂಡಿಕಾ ಹೋಮ, : ಕೋಟೆಕಣಿ ಸಪರಿವಾರ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಗಣಪತಿ ಹೋಮ, ಕೊರಕೋಡು ಶ್ರೀ ದುರ್ಗಾಪರಮೇಶ್ವರೀ ಮಹಾಕಾಳೀ ಕಾಶೀ ಕಾಲಭೈರವೇಶ್ವರ ದೇವಸ್ಥಾನದಲ್ಲಿ ಗಣಪತಿ ಹೋಮ, ಕಾರ್ಲೆ ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ಗಣ ಹೋಮ, ಕಾಸರಗೋಡು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಂದಾ ದೀಪವನ್ನು ಶ್ರೀ ಕ್ಷೇತ್ರದ ತಂತ್ರಿವರ್ಯ ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಬೆಳಗಿದರು)