ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಆಮ್ಲಜನಕ ಪೂರೈಸಲು ಕೇಂದ್ರ ಸರ್ಕಾರವು ಕಳೆದ 24 ಗಂಟೆಗಳಲ್ಲಿ 3 ಬಾರಿ ಆರ್ಡರ್ ಮಾಡಿದೆ.
ಕಳೆದ 10 ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ತೀವ್ರವಾಗುತ್ತಿದ್ದು, ಆಕ್ಸಿಜನ್ ಪೂರೈಕೆಯಿಲ್ಲದೆ ರೋಗಿಗಳು ಮೃತಪಡುತ್ತಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಇದೀಗ ಸರ್ಕಾರವು ಆಕ್ಸಿಜನ್ ಸಿಲಿಂಡರ್ಗಾಗಿ ಒಂದೇ ದಿನದಲ್ಲಿ ಮೂರು ಬಾರಿ ಆರ್ಡರ್ ಮಾಡಿದೆ.
ದೇಶಾದ್ಯಂತ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯಕೀಯ ದರ್ಜೆಯ ಆಮ್ಲಜನಕ ಉತ್ಪಾದನೆ ಪೂರೈಕೆ ಹೆಚ್ಚಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಕೋವಿಡ್-19 ಏರಿಕೆ ಹಿನ್ನೆಲೆಯಲ್ಲಿ ದೇಶಾದ್ಯಂತ ಸಮರ್ಪಕ ಆಮ್ಲಜನಕ ಸಾಧನಗಳ ಲಭ್ಯತೆಯ ಕುರಿತು ಏ.16 ರಂದು ಸಮಗ್ರ ಪರಿಶೀಲನೆ ನಡೆಸಿದರು.
ದೇಶಾದ್ಯಂತ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರ ನಡುವೆ ಪ್ರಧಾನಿ ನರೇಂದ್ರ ಮೋದಿ ಹೆಚ್ಚಿನ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆ ಮಾಡುವ ಸಾಧನಗಳ ತಯಾರಿಕೆಯನ್ನು ಏರಿಕೆ ಮಾಡುವಂತೆ ಕರೆ ನೀಡಿದ್ದಾರೆ.
ಸಮಗ್ರ ಪರಿಶೀಲನೆ ವೇಳೆ ಪ್ರಧಾನಿ ನರೇಂದ್ರ ಮೋದಿ, ಆರೋಗ್ಯ, ಸ್ಟೀಲ್, ರಸ್ತೆ ಸಾರಿಗೆ ಕೈಗಾರಿಕಾ, ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಗಳಿಂದ ಮಾಹಿತಿಯನ್ನು ಪಡೆದಿದ್ದಾರೆ ಎಂದು ಪಿಎಂಒ ಮಾಹಿತಿ ನೀಡಿದೆ.
ಕೋವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡುವ ಪ್ರಕ್ರಿಯೆಯಲ್ಲಿ ಆಮ್ಲಜನಕ ಪೂರೈಕೆ ಸಾಧನ ಪ್ರಮುಖ ಪಾತ್ರ ವಹಿಸಲಿವೆ. ಈ ಕಾರಣದಿಂದಾಗಿ ಉತ್ಪಾದನೆ ಹೆಚ್ಚಿಸುವಂತೆ ಪ್ರಧಾನಿಗಳು ಕರೆ ನೀಡಿದ್ದಾರೆ ಎಂದು ಪಿಎಂಒ ತಿಳಿಸಿದೆ.