ಕಾಸರಗೋಡು: ಕೋವಿಡ್ ವ್ಯಾಪಿಸುತ್ತಿರುವುದನ್ನು ತಡೆಗಟ್ಟಲು ಸರ್ಕಾರ ಜಾರಿಗೆ ತಂದಿರುವ ಮಾನದಂಡ ಕಟ್ಟುನಿಟ್ಟಾಗಿ ಪಾಲಿಸುವ ನಿಟ್ಟಿನಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ ರಾಜೀವ್ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಕಾರ್ಯಾಚರಣೆ ಆರಂಭಗೊಂಡಿತು.
ವಿವಿಧ ವ್ಯಾಪಾರಿ ಸಂಸ್ಥೆಗಳು, ಬಸ್ಗಳು, ಮಾಲ್ಗಳಿಗೆ ತೆರಳಿ ಸಾಮಾಜಿಕ ಅಂತರ ಪಾಲಿಸುವುದರ ಜತೆಗೆ ಮಾಸ್ಕ್ ಧರಿಸುವುದು, ಕೈಗಳನ್ನು ಶುಚೀಕರಿಸುವುದು ಸೇರಿದಂತೆ ಕೋವಿಡ್ ಮಾನದಂಡ ಕಟ್ಟುನಿಟ್ಟಾಗಿ ಪಾಲಿಸುವಂತೆ ಜನರಲ್ಲಿ ಧ್ವನಿವರ್ಧಕದ ಮೂಲಕ ಆದೇಶಿಸಿದರು. ಕೋವಿಡ್ ಮಾನದಂಡ ಪಾಲಿಸದಿದ್ದಲ್ಲಿ ಅಂಗಡಿಗಳ ಪರವಾನಗಿ ರದ್ದುಪಡಿಸುವುದಾಗಿಯೂ ಎಚ್ಚರಿಕೆ ನೀಡಲಾಯಿತು. ವಿವಿಧ ಪೊಲೀಸ್ ಠಾಣೆ ವಯಾಪ್ತಿಯಲ್ಲಿ ಪೊಲೀಸ್ ವಾಹನಕ್ಕೆ ಧ್ವನಿವರ್ಧಕ ಅಳವಡಿಸಿ ಜನರಿಗೆ ಮಾಹಿತಿ ನೀಡಲಾಯಿತು.