HEALTH TIPS

ಅಸ್ತಿತ್ವದಲ್ಲೇ ಇಲ್ಲದ ಪೊಲೀಸ್​ ಠಾಣೆ ಹೆಸರಿಸಿ ನ್ಯಾಯಲಯಕ್ಕೆ ಯಾಮಾರಿಸಿದ ಪೊಲೀಸ್​ ಅಧಿಕಾರಿ!

Top Post Ad

Click to join Samarasasudhi Official Whatsapp Group

Qries

        ಉತ್ತರ ಪ್ರದೇಶ: ಜನ ಸಾಮಾನ್ಯರು ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ನ್ಯಾಯಲಯಕ್ಕೆ ಸುಳ್ಳು ಹೇಳುವುದು, ತಪ್ಪು ಸಾಕ್ಷ್ಯ ನೀಡುವುದು ಹೀಗೆ ಅನೇಕ ಸಾಹಸಗಳಿಗೆ ಕೈ ಹಾಕಿ ಕೊನೆಗೆ ಹತಾಶರಾಗುವುದನ್ನು ನೊಡಿದ್ದೇವೆ. ಆದರೆ ಇಲ್ಲಿ ಕಾನೂನಿನ ಸಂರಕ್ಷರಾದ ಪೊಲೀಸ್​ ಅಧಿಕಾರಿಯೇ ನ್ಯಾಯಲಯಕ್ಕೆ ಯಾಮಾರಿಸಿ, ಛೀಮಾರಿ ಹಾಕಿಸಿಕೊಂಡಿರುವ ಘಟನೆ ನಡೆದಿದೆ.


          ಉತ್ತರ ಪ್ರದೇಶದ ಬಿಜ್ನೋರ್‌ ಜಿಲ್ಲೆಯ ಸಬ್‌ಇನ್ಸ್‌ಪೆಕ್ಟರ್‌ ಅಮಿತ್‌ ಕುಮಾರ್‌ ಎನ್ನುವ ಪೊಲೀಸ್‌ ಅಧಿಕಾರಿ. ಅಮ್‌ರೋಹಾ ಜಿಲ್ಲೆಯ ಅಕ್ಬರಾಬಾದ್‌ನಲ್ಲಿ ಆರೋಪಿಯೊಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಅವರು ಹೇಳಿದ್ದರು. ವಾಸ್ತವದಲ್ಲಿ ಅಲ್ಲಿ ಯಾವುದೇ ಪೊಲೀಸ್‌ ಠಾಣೆ ಅಸ್ತಿತ್ವದಲ್ಲಿ ಇಲ್ಲದಿರುವುದನ್ನು ಕಂಡು ನ್ಯಾಯಮೂರ್ತಿ ಜೆ ಜೆ ಮುನೀರ್‌ ಕೆಂಡಾಮಂಡಲರಾದರು.

        ರಾಜ್ಯದಲ್ಲಿ ಅಸ್ತಿತ್ವದಲ್ಲಿಲ್ಲದ ಪೊಲೀಸ್‌ ಠಾಣೆಯನ್ನು ಹೆಸರಿಸಿ ನ್ಯಾಯಾಲಯದ ದಿಕ್ಕು ತಪ್ಪಿಸಿದ್ದಕ್ಕಾಗಿ ವಿವರಣೆ ನೀಡುವಂತೆ ಅಲಾಹಾಬಾದ್‌ ಹೈಕೋರ್ಟ್‌ ಈ ಪೊಲೀಸ್​ ಅಧಿಕಾರಿಗೆ ಶೋಕಾಸ್‌ ನೋಟಿಸ್‌ ನೀಡಿದೆ.

        ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯು ಕಳೆದ ಜೂನ್ 25 ರಂದು ನಡೆದ ವಿಚಾರಣೆ ವೇಳೆ ಹೆಚ್ಚುವರಿ ಸರ್ಕಾರಿ ವಕೀಲರು (ಎಜಿಎ) ಅಕ್ಬರಾಬಾದ್‌ನ ಪೊಲೀಸ್ ಠಾಣೆಯಲ್ಲಿ ಉತ್ತರಪ್ರದೇಶದ ದರೋಡೆಕಾರರ ನಿಗ್ರಹ ಕಾಯಿದೆಯಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್‌ಐ ಸೂಚನೆಯಂತೆ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದರು.

       ಜುಲೈ 2ರಂದು ಪ್ರಕರಣ ಆಲಿಸಿದಾಗ, “ವಿಶೇಷ ಕಾರ್ಯಾಚರಣೆ ಪಡೆಯಾಗಿ ರೂಪುಗೊಂಡಿದ್ದ ನಿಗೂಢ ಪೊಲೀಸರ ಗುಂಪೊಂದು ಅತಿರೇಕದಲ್ಲಿ ಕೈಗೊಂಡ ಕ್ರಮಕ್ಕೆ ತಮ್ಮ ಕಕ್ಷಿದಾರರು ತುತ್ತಾಗಿದ್ದಾರೆ. ಆರೋಪಿಯನ್ನು ಅವರ ಮನೆಯಿಂದ ಬಂಧಿಸಲಾಗಿದ್ದು ಮೋಟಾರ್‌ ಬೈಕ್‌ ಮತ್ತು ಕಾರುಗಳನ್ನು ಅವರಿಂದ ವಶಪಡಿಸಿಕೊಂಡಿರುವುದಾಗಿ ಸುಳ್ಳು ಹೇಳಲಾಗಿದೆ. ಅಮ್‌ರೋಹಾ ಜಿಲ್ಲೆಯಲ್ಲಿಅಕ್ಬರಾಬಾದ್‌ ಹೆಸರಿನ ಯಾವುದೇ ಪೊಲೀಸ್‌ ಠಾಣೆ ಅಸ್ತಿತ್ವದಲ್ಲಿಲ್ಲ” ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದರು.

      ನ್ಯಾಯಾಲಯ ಇದನ್ನು ಪ್ರಶ್ನಿಸಿದಾಗ ಅರ್ಜಿದಾರರ ಪರ ವಕೀಲರ ಹೇಳಿಕೆಗೆ ಎಜಿಎ ಯಾವುದೇ ಆಕ್ಷೇಪ ವ್ಯಕ್ತಪಡಿಸಿರಲಿಲ್ಲ. ವಿಚಾರಣೆ ನಡೆಸಿದ ಅವರು, ಎಸ್‌ಐ ಅಮಿತ್‌ಕುಮಾರ್‌ ನೀಡಿದ ಮಾಹಿತಿ ಆಧರಿಸಿ ಹೇಳಿಕೆ ನೀಡಿದ್ದಾಗಿ ತಿಳಿಸಿದ್ದರು. ಅದರಂತೆ ಕುಮಾರ್‌ಗೆ ಶೋಕಾಸ್ ನೋಟಿಸ್ ನೀಡಲಾಗಿದೆ.
           ಸರ್ಕಾರಿ ವಕೀಲರಿಗೆ ಸುಳ್ಳು ಮತ್ತು ತಪ್ಪು ಮಾಹಿತಿ ನೀಡಿ ನ್ಯಾಯಾಲಯವನ್ನು ತಪ್ಪು ದಾರಿಗೆ ಎಳೆದಿದ್ದಕ್ಕಾಗಿ ಏಕೆ ಸೂಕ್ತ ಕ್ರಮ ಕೈಗೊಳ್ಳಬಾರದು ಎಂಬ ಕುರಿತು ಬಿಜ್ನೋರ್‌ ಜಿಲ್ಲೆ ಕೊತ್ವಾಲಿ ಪೊಲೀಸ್‌ ಠಾಣೆಯ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ಗೆ ನೋಟಿಸ್‌ ನೀಡಬೇಕು ಏಕೆಂದರೆ ಅರ್ಜಿದಾರರ ವಿರುದ್ಧ ಉತ್ತರಪ್ರದೇಶ ದರೋಡೆಕೋರರ ನಿಗ್ರಹ ಕಾಯಿದೆಯ ಸೆಕ್ಷನ್‌ 3 (1)ರಡಿ ಅಪರಾಧಗಳಿಲ್ಲವೋ ಅದೇ ರೀತಿ ಅಮ್‌ರೋಹಾ ಜಿಲ್ಲೆಯಲ್ಲಿ ಆ ಹೆಸರಿನ ಯಾವುದೇ ಪೊಲೀಸ್‌ ಠಾಣೆ ಅಸ್ತಿತ್ವದಲ್ಲಿಲ್ಲ” ಎಂದು ನ್ಯಾಯಾಲಯ ತನ್ನ ಆದೇಶದಲ್ಲಿ ತಿಳಿಸಿದೆ. ಪ್ರಕರಣದ ಮುಂದಿನ ವಿಚಾರಣೆ ಜುಲೈ 8 ರಂದು ನಡೆಯಲಿದೆ.

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries