HEALTH TIPS

ರಾಜಸ್ಥಾನದ ಬಾರ್ಮರ್ ಹೆದ್ದಾರಿಯಲ್ಲಿ ಭಾರತೀಯ ವಾಯುಪಡೆಯ ಮೊದಲ ತುರ್ತು ಭೂಸ್ಪರ್ಶ ನೆಲೆ ಉದ್ಘಾಟನೆ

Top Post Ad

Click to join Samarasasudhi Official Whatsapp Group

Qries

             ಬಾರ್ಮರ್ರಾಜಸ್ತಾನದ ಬರ್ಮಾರ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರತೀಯ ವಾಯುಪಡೆಗಾಗಿ ನಿರ್ಮಿಸಲಾಗಿರುವ ತುರ್ತು ಭೂಸ್ಪರ್ಶ ನೆಲೆ(ಇಎಲ್‌ಎಫ್)ಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದರು.

           ಬರ್ಮಾರ್ ನ ಗಾಂಧವ್ ಭಕಾಸರ್ ವಿಭಾಗದ ರಾಷ್ಟ್ರೀಯ ಹೆದ್ದಾರಿ ಭಾರತೀಯ ವಾಯುಪಡೆ ವಿಮಾನಗಳ ಭೂ ಸ್ಪರ್ಶಕ್ಕಾಗಿ ಬಳಸುತ್ತಿರುವ ಭಾರತದ ಮೊದಲ ರಾಷ್ಟ್ರೀಯ ಹೆದ್ದಾರಿಯಾಗಿದೆ.

ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ, ಬಿಪಿನ್ ರಾವತ್ ಅವರನ್ನು ಹೊತ್ತ ಭಾರತೀಯ ವಾಯುಪಡೆಯ ಎ ಹರ್ಕ್ಯುಲಸ್ ಸಿ-130ಜೆ ವಿಮಾನ ಗುರುವಾರ ಈ ಹೆದ್ದಾರಿಯಲ್ಲಿ ಅಣುಕು ತುರ್ತು ಭೂಸ್ಪರ್ಶ ಮಾಡಿತು.

            ಸುಖೋಯ್ -30 ಎಂಕೆಐ ಫೈಟರ್‌ನಿಂದ ಆರಂಭಿಸಿ ಅನೇಕ ಲ್ಯಾಂಡಿಂಗ್ ಮತ್ತು ಟಚ್‌ಡೌನ್ ಕಾರ್ಯಾಚರಣೆಗಳನ್ನು ನಡೆಸಲಾಯಿತು. ಎಎನ್-32 ಮಿಲಿಟರಿ ಸಾರಿಗೆ ವಿಮಾನ ಮತ್ತು ಐಎಎಫ್ ನ ಎಂಐ-17v5 ಹೆಲಿಕಾಪ್ಟರ್ ಸಹ ಇಎಲ್‌ಎಫ್ ನಲ್ಲಿ ಇಳಿಯಿತು. ಇದು ಸಹಾಯಕ ಮಿಲಿಟರಿ ವಾಯುನೆಲೆಯಾಗಿ ಕಾರ್ಯನಿರ್ವಹಿಸಲು ತನ್ನ ಸಂಪೂರ್ಣ ಕಾರ್ಯಾಚರಣೆಯ ಸಿದ್ಧತೆಯನ್ನು ತೋರಿಸುತ್ತದೆ.

           ಭಾರತೀಯ ವಾಯುಪಡೆಗೆ ತುರ್ತು ಭೂಸ್ಪರ್ಶದ ಸೌಲಭ್ಯಕ್ಕಾಗಿ ರಾಷ್ಟ್ರೀಯ ಹೆದ್ದಾರಿ 925ರ ಸತ್ತಾ-ಗಾಂಧವ್ ಸ್ಟ್ರೆಚ್ ನಲ್ಲಿ 3 ಕಿ.ಮೀ ರಸ್ತೆಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಅಭಿವೃದ್ಧಿಪಡಿಸಿದೆ.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries