ಕಾಸರಗೋಡು: ಘನ ತ್ಯಾಜ್ಯ ಸಂಸ್ಕರಣೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ನಗರಸಭೆಗಳಿಗೆ ನೀಡಲಾಗುವ ನವಕೇರಳ ಪ್ರಶಸ್ತಿಯನ್ನು ನೀಲೇಶ್ವರ ನಗರಸಭೆಗೆ ವಿತರಣೆ ಮಾಡಲಾಯಿತು. ಶಾಸಕ ಎಂ.ರಾಜಗೋಪಾಲನ್ ಪ್ರಶಸ್ತಿ ಪ್ರದಾನ ಮಾಡಿದರು. ಹರಿತ ಕ್ರಿಯಾ ಸೇನೆ ಮತ್ತು ನಗರಸಭೆಯ ಆರೋಗ್ಯ ವಿಭಾಗಕ್ಕೆ ಬಹುಮಾನ ವಿತರಿಸಲಾಯಿತು. ಅಧ್ಯಕ್ಷೆ ಟಿ.ವಿ.ಶಾಂತಾ ಅಧ್ಯಕ್ಷತೆ ವಹಿಸಿದ್ದರು. ಉಪಜಿಲ್ಲಾಧಿಕಾರಿ ಡಿ.ಆರ್.ಮೇಘಶ್ರೀ ಮುಖ್ಯ ಅತಿಥಿಯಾಗಿದ್ದರು. ನಗರಸಭೆ ಸ್ಥಾಯೀ ಸಮಿತಿ ಅಧ್ಯಕ್ಷರುಗಳು, ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.