HEALTH TIPS

ದೆಹಲಿ ವಿಧಾನಸಭೆಯ 'ಗುಪ್ತ ಸುರಂಗ'ದ ಬಗ್ಗೆ ವೈಜ್ಞಾನಿಕ ಸಂಶೋಧನೆ ಅಗತ್ಯ: ತಜ್ಞರು

                 ನವದೆಹಲಿ: ದೆಹಲಿ ವಿಧಾನಸಭಾ ಕಟ್ಟಡದಲ್ಲಿ ಪತ್ತೆಯಾಗಿರುವ ಕೆಂಪು ಕೋಟೆಯನ್ನು ಸಂಪರ್ಕಿಸುವ ಗುಪ್ತ ಸುರಂಗ ಮಾರ್ಗದ ರಹಸ್ಯ ಬೇಧಿಸಲು ವೈಜ್ಞಾನಿಕ ಸಂಶೋಧನೆಯ ಅಗತ್ಯವಿದೆ ಎಂದು ಇತಿಹಾಸ ತಜ್ಞರು ಮತ್ತು ಸಂಶೋಧಕರು ಅಭಿಪ್ರಾಯಪಟ್ಟಿದ್ದಾರೆ.

                2016ರಲ್ಲಿ ಮೊದಲ ಬಾರಿಗೆ ವರದಿಯಾಗಿರುವ ಈ ಗುಪ್ತ ಸುರಂಗವು ಈಗ ಮತ್ತೆ ಮುನ್ನೆಲೆಗೆ ಬಂದಿದ್ದು, ತೀವ್ರ ಕುತೂಹಲವನ್ನು ಕೆರಳಿಸಿದೆ.

               ಪುರಾತತ್ವಶಾಸ್ತ್ರದ ದೃಷ್ಟಿಕೋನದಿಂದ ಸುರಂಗ ಮಾರ್ಗದ ರಚನೆಯ ಬಗ್ಗೆ ವೈಜ್ಞಾನಿಕ ಶೋಧನೆ ಮಾಡದಿರುವ ಹೊರತಾಗಿ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

           ಈ ಭೂಗತ ಸುರಂಗ ಮಾರ್ಗದ ಮುಂಭಾಗವು ದೆಹಲಿ ವಿಧಾನಸಭಾ ಕಟ್ಟಡದ (ಹಳೆಯ ಸೆಕ್ರೆಟರಿಯೇಟ್) ಅಸೆಂಬ್ಲಿ ಹಾಲ್‌ನಲ್ಲಿದೆ.

            1912ನೇ ಇಸವಿಯಲ್ಲಿ ಬ್ರಿಟಿಷರು ಈ ಸುರಂಗ ಮಾರ್ಗವನ್ನು ನಿರ್ಮಿಸಿದ್ದರು ಎನ್ನಲಾಗಿದೆ. ಬ್ರಿಟಿಷರು ಕೋಲ್ಕತ್ತಾದಿಂದ ದೆಹಲಿಗೆ ರಾಜಧಾನಿಯನ್ನು ಸ್ಥಳಾಂತರಿಸಿದಾಗ ಕೇಂದ್ರ ಶಾಸಕಾಂಗ ಸಭೆಯಾಗಿ ಬಳಸಲಾಗುತ್ತಿದ್ದ ಈ ಕಟ್ಟಡವನ್ನು 1926ರಲ್ಲಿ ನ್ಯಾಯಾಲಯವಾಗಿ ಪರಿವರ್ತಿಸಲಾಯಿತು. ಈ ಸುರಂಗ ಮಾರ್ಗದ ಮೂಲಕ ಸ್ವಾತಂತ್ರ್ಯ ಹೋರಾಟಗಾರರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿತ್ತು.

           ಇತಿಹಾಸದ ಪ್ರಾಮುಖ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಐತಿಹಾಸಿಕ ಕಟ್ಟಡವನ್ನು ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಸೂಚಕ ಕೇಂದ್ರವಾಗಿ ಬದಲಾಯಿಸುವ ಯೋಜನೆಯಿದ್ದು, ಮುಂದಿನ ವರ್ಷ ಸಾರ್ವಜನಿಕರಿಗಾಗಿ ತೆರೆದುಕೊಳ್ಳುವ ಇರಾದೆಯನ್ನು ಹೊಂದಿದ್ದೇವೆ ಎಂದು ದೆಹಲಿ ವಿಧಾನಸಭಾ ಸ್ಪೀಕರ್ ರಾಮ್ ನಿವಾಸ್ ಗೋಯಲ್ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries