HEALTH TIPS

ರಾಜ್ಯದಲ್ಲಿ ಇಂದು 5080 ಮಂದಿಗೆ ಕೋವಿಡ್ ಪತ್ತೆ:

           ತಿರುವನಂತಪುರ: ರಾಜ್ಯದಲ್ಲಿ ಇಂದು 5080 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಎರ್ನಾಕುಳಂ 873, ಕೋಝಿಕ್ಕೋಡ್ 740, ತಿರುವನಂತಪುರ 621, ತ್ರಿಶೂರ್ 521, ಕಣ್ಣೂರು 361, ಕೊಟ್ಟಾಯಂ 343, ಕೊಲ್ಲಂ 307, ಇಡುಕ್ಕಿ 276, ವಯನಾಡ್ 228, ಪತ್ತನಂತಿಟ್ಟ 206, ಮಲಪ್ಪುರಂ 203, ಪಾಲಕ್ಕಾಡ್ 175, ಆಲಪ್ಪುಳ 143, ಕಾಸರಗೋಡು 83 ಎಂಬಂತೆ ಸೋಂಕು ದೃಢಪಡಿಸಲಾಗಿದೆ.

              ಕಳೆದ 24 ಗಂಟೆಗಳಲ್ಲಿ 53,892 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸಾಪ್ತಾಹಿಕ ಸೋಂಕಿನ ಜನಸಂಖ್ಯೆಯ ಅನುಪಾತ 10 ಕ್ಕಿಂತ ಹೆಚ್ಚಿನ 39 ಸ್ಥಳೀಯಾಡಳಿತ ಪ್ರದೇಶಗಳಲ್ಲಿ 46 ವಾರ್ಡ್‍ಗಳಿವೆ. ಇಲ್ಲಿ ಕಟ್ಟುನಿಟ್ಟಿನ ನಿಯಂತ್ರಣ ಇರಲಿದೆ.

                      ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 1,92,768 ಮಂದಿ ಜನರು ನಿಗಾದಲ್ಲಿದ್ದಾರೆ. ಇವರಲ್ಲಿ 1,87,604 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್‍ನಲ್ಲಿದ್ದಾರೆ ಮತ್ತು 5164 ಮಂದಿ ಆಸ್ಪತ್ರೆಯ ನಿಗಾದಲ್ಲಿದ್ದಾರೆ. ಒಟ್ಟು 269 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ, 58,088 ಕರೋನಾ ಪ್ರಕರಣಗಳಲ್ಲಿ, ಕೇವಲ 7.2 ಶೇಕಡಾ ಜನರು ಮಾತ್ರ ಆಸ್ಪತ್ರೆಗಳು /ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

                  ಕಳೆದ 24 ಗಂಟೆಗಳಲ್ಲಿ ಕೋವಿಡ್ ಬಾಧಿಸಿ 40 ಮಂದಿ ಮೃತರಾಗಿದ್ದಾರೆ. ಇದಲ್ಲದೆ, ಸುಪ್ರೀಂ ಕೋರ್ಟ್‍ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ 156 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 37,495ಕ್ಕೆ ಏರಿಕೆಯಾಗಿದೆ.

                  ಇಂದು ಸೋಂಕು ಪತ್ತೆಯಾದವರಲ್ಲಿ 28 ಮಂದಿ ಹೊರ ರಾಜ್ಯದವರು. 4776 ಮಂದಿ ಜನರು ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ. 252 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. ಇಂದು 24 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ದೃಢಪಡಿಸಲಾಗಿದೆ. 

                      ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ ಮಂದಿ 7908 ಜನರು ಗುಣಮುಖರಾಗಿದ್ದಾರೆ. ತಿರುವನಂತಪುರ 1392, ಕೊಲ್ಲಂ 741, ಪತ್ತನಂತಿಟ್ಟ 560, ಆಲಪ್ಪುಳ 278, ಕೊಟ್ಟಾಯಂ 526, ಇಡುಕ್ಕಿ 514, ಎರ್ನಾಕುಳಂ 874, ತ್ರಿಶೂರ್ 938, ಪಾಲಕ್ಕಾಡ್ 283, ಮಲಪ್ಪುರಂ 178, ಕೋಝಿಕ್ಕೋಡ್ 683, ವಯನಾಡ್ 451, ಕಣ್ಣೂರು 397, ಕಾಸರಗೋಡು 93 ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ 58,088 ಮಂದಿ ಜನರಿಗೆ ಸೋಂಕು ಪತ್ತೆಯಾಗಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 50,04,786 ಮಂದಿ ಕೊರೊನಾದಿಂದ ಮುಕ್ತರಾಗಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries