ಬದಿಯಡ್ಕ: ನೀರ್ಚಾಲು ವಿಘ್ನೇಶ್ವರ ಯಕ್ಷಗಾನ ಕಲಾಸಂಘದ ನೇತೃತ್ವದಲ್ಲಿ ನಾಳೆ(ಭಾನುವಾರ) ಅಪರಾಹ್ನ 2 ರಿಂದ ನೀರ್ಚಾಲು ಶಾಲಾ ವಠಾರದಲ್ಲಿ ಖ್ಯಾತ ಕಲಾವಿದರ ಕೂಡುವಿಕೆಯಲ್ಲಿ ಕೌಶಿಕ ಚರಿತ್ರೆ ಪ್ರಸಂಗದ ಯಕ್ಷಗಾನ ತಾಳಮದ್ದಳೆ ನಡೆಲಿದೆ.
ನೀರ್ಚಾಲು ಮಹಾಜನ ವಿದ್ಯಾಸಂಸ್ಥೆಯ ವ್ಯವಸ್ಥಾಪಕ ಜಯದೇವ ಖಂಡಿಗೆ ದೀಪ ಬೆಳಗಿಸಿ ಉದ್ಘಾಟಿಸುವರು. ಈ ಸಂದರ್ಭ ಅಗಲಿದ ಕಲಾವಿದರಿಗೆ ನುಡಿನಮನ ನ ಬಳಿಕ ನಡೆಯುವ ತಾಳಮದ್ದಳೆಯಲ್ಲಿ ಹಿಮ್ಮೇಳದಲ್ಲಿ ಪುತ್ತಿಗೆ ರಘುರಾಮ ಹೊಳ್ಳ, ತಲ್ಪನಾಜೆ ವೆಂಕಟರಮಣ ಭಟ್, ಸುಬ್ರಹ್ಮಣ್ಯ ಭಟ್ ದೇಲಂತಮಜಲು, ಚೈತನ್ಯಕೃಷ್ಣ ಪದ್ಯಾಣ ಭಾಗವಹಿಸುವರು. ಮುಮ್ಮೇಳದಲ್ಲಿ ರಾಧಾಕೃಷ್ಣ ಕಲ್ಚಾರ್, ಜಯಪ್ರಕಾಶ ಶೆಟ್ಟಿ ಪೆರ್ಮುದೆ, ಜಬ್ಬಾರ್ ಸಮೋ ಸಂಪಾಜೆ, ಪಕಳಕುಂಜ ಶಾಮ ಭಟ್, ಹರೀಶ್ ಬಳಂತಿಮೊಗರು, ಬಾಲಕೃಷ್ಣ ಆಚಾರ್ಯ ನೀರ್ಚಾಲು ಪಾತ್ರಗಳನ್ನು ನಿರ್ವಹಿಸುವರು.