HEALTH TIPS

ಪತ್ರಕರ್ತ ಕೆ.ಎಂ ಅಹಮ್ಮದ್ ಸಂಸ್ಮರಣೆ, ಮಾಧ್ಯಮ ಪುರಸ್ಕಾರ

             ಕಾಸರಗೋಡು: ಹಿರಿಯ ಪತ್ರಕರ್ತ ಕೆ.ಎಂ ಅಹಮ್ಮದ್ ಅವರ ಹೆಸರಲ್ಲಿ ಕಾಸರಗೋಡು ಪ್ರೆಸ್‍ಕ್ಲಬ್ ವತಿಯಿಂದ ನೀಡಲಾಗುವ ಮಾಧ್ಯಮ ಪುರಸ್ಕಾರಕ್ಕೆ ಪತ್ರಕರ್ತ ಜಲೀಲ್ ಕೆ.ಪಿ ಆಯ್ಕೆಯಾಗಿದ್ದಾರೆ. ಚಂದ್ರಿಕಾ ದಿನಪತ್ರಿಕೆಯ ಸ್ಪೆಶ್ಯಲ್ ಕರೆಸ್ಪಾಂಡ್ ಆಗಿ ಕೆಲಸ ನಿರ್ವಹಿಸುತ್ತಿರುವ ಇವರ ವಿಶೇಷ ಸಂಪಾದಕೀಯವನ್ನು ಪುರಸ್ಕಾರಕ್ಕೆ ಆಯ್ಕೆಮಾಡಿಕೊಳ್ಳಲಾಗಿದೆ.

               ಪ್ರಶಸ್ತಿ 10001 ರೂ. ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಡಿ. 16ರಂದು ಬೆಳಗ್ಗೆ 11ಕ್ಕೆ ಕಾಸರಗೋಡು ಪ್ರೆಸ್‍ಕ್ಲಬ್ ಸಭಾಂಗಣದಲ್ಲಿ ಆಯೋಜಿಸಿರುವ ಕೆ.ಎಂ ಅಹಮ್ಮದ್ ಮಾಸ್ಟರ್ ಸಂಸ್ಮರಣಾ ಸಮಾರಂಭದಲ್ಲಿ ನಡೆಯುವುದು. ಕೇರಳದ ಪ್ರಾಚ್ಯವಸ್ತು, ಬಂದರು ಖಾತೆ ಸಚಿವ ಅಹಮ್ಮದ್ ದೇವರ್‍ಕೋವಿಲ್ ಪ್ರಶಸ್ತಿಪ್ರದಾನ ಮಾಡುವರು. ಪ್ರಸ್‍ಕ್ಲಬ್ ಅಧ್ಯಕ್ಷ ಮಹಮ್ಮದ್ ಹಾಶಿಂ ಅಧ್ಯಕ್ಷತೆ ವಹಿಸುವರು. ಹಿರಿಯ ಪತ್ರಕರ್ತ ವೆಂಕಟೇಶ್ ರಾಮಕೃಷ್ಣನ್ ಸಂಸ್ಮರಣಾ ಭಾಷಣ ಮಾಡುವರು. ಕೇರಳ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಅಧ್ಯಕ್ಷ ಇ.ಎಸ್. ಸುಭಾಷ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಜಿಲ್ಲಾ ವಾರ್ತಾ ಅಧಿಕಾರಿ ಮಧುಸೂಧನನ್, ಪತ್ರಕರ್ತ ಕ.ಎಂ. ಮುಜೀಬ್ ಉಪಸ್ಥಿತರಿರುವರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries