HEALTH TIPS

ಕೊರೊನಾ ಪ್ರಸರಣ ತೀವ್ರ; ಸಂತೋಷ್ ಟ್ರೋಫಿ ಫುಟ್ಬಾಲ್ ಪಂದ್ಯಾವಳಿ ಮುಂದೂಡಿಕೆ

                                                    

                    ಕೋಝಿಕ್ಕೋಡ್: ಕೇರಳ ಆತಿಥ್ಯದಲ್ಲಿ ನಡೆಯಬೇಕಿದ್ದ ಸಂತೋಷ್ ಟ್ರೋಫಿ ಫುಟ್ಬಾಲ್ ಟೂರ್ನಿಯನ್ನು ಮುಂದೂಡಲಾಗಿದೆ. ರಾಜ್ಯದಲ್ಲಿ ಕೊರೋನಾ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪಂದ್ಯವನ್ನು ಮುಂದೂಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಹೊಸ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ತಿಳಿಸಿದೆ.

                   ಪಂದ್ಯಾವಳಿಯು ಫೆಬ್ರವರಿ 20 ರಂದು ಮಲಪ್ಪುರಂ ಮಂಜೇರಿಯಲ್ಲಿ ಪ್ರಾರಂಭವಾಗಬೇಕಿತ್ತು. ಕೊರೋನಾ ವಿಸ್ತರಣೆ ಪರಿಸ್ಥಿತಿಯನ್ನು ಅವಲೋಕನ ನಡೆಸಿದ ನಂತರ ಫೆಬ್ರವರಿ ಮೂರನೇ ವಾರದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅಧಿಕೃತರು  ತಿಳಿಸಿದ್ದಾರೆ.

             ಅರ್ಹತಾ ಸುತ್ತಿನಲ್ಲಿ ಕೇರಳ ಉತ್ತಮ ಪ್ರದರ್ಶನ ನೀಡಿದೆ. ಈ ಬಾರಿ ಕೇರಳ ತಂಡ ಮೈದಾನದಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಚಾಂಪಿಯನ್ ಆಗಲು ಸಿದ್ಧತೆ ನಡೆಸಿತ್ತು. ಈ ನಡುವೆ ಟೂರ್ನಿಯನ್ನು ಮುಂದೂಡಲಾಗಿದೆ ಎಂಬ ಸುದ್ದಿ ಹೊರಬಿದ್ದಿದೆ. ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಮೊದಲು ಹೆಚ್ಚಿನ ಅಭ್ಯಾಸ ಮಾಡಲು ಸಮಯವಿದೆ ಎಂದು ತಂಡವು ಪ್ರತಿಕ್ರಿಯಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries