HEALTH TIPS

ಕುಕ್ಕಂಕೂಡ್ಲಲ್ಲಿ ಸಂಭ್ರಮದ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಇಂದು ಬ್ರಹ್ಮಕಲಶ ಪೂಜೆ, ಪೀಠಾಧಿವಾಸ ವಿಧಿಗಳು: ನಾಳೆ ಬ್ರಹ್ಮಕಲಶ

     

        ಬದಿಯಡ್ಕ: ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಕುಕ್ಕಂಕೂಡ್ಲು ಶ್ರೀಕಂಠಪ್ಪಾಡಿ ಶ್ರೀಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ವೈದಿಕ, ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳು ಸಡಗರದಿಂದ ನಡೆಯುತ್ತಿದ್ದು, ನೂರಾರು ಭಕ್ತರು ಭಾಗವಹಿಸುತ್ತಿದ್ದಾರೆ. 


           ಕಾರ್ಯಕ್ರಮದ ಅಂಗವಾಗಿ  ಶುಕ್ರವಾರ  ಬೆಳಿಗ್ಗೆ 6 ರಿಂದ ಗಣಪತಿಹೋಮ, ಇಂದ್ರಾದಿ ದಿಕ್ಪಾಲಕ ಪ್ರತಿಷ್ಠೆ, ಸಪ್ರಮಾತೃಕಾ ಪ್ರತಿಷ್ಠೆ, ನಿರ್ಮಾಲ್ಯಧಾರಿ ಪ್ರತಿಷ್ಠೆ, ಅಂಕುರಪೂಜೆ ನಡೆಯಿತು.  10.30 ರಿಂದ ಕಾಸರಗೋಡಿನ ವಿದುಷಿಃ ಉಷಾ ಈಶ್ವರ ಭಟ್ ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಚೇರಿ ನಡೆಯಿತು.  ಮಧ್ಯಾಹ್ನ 12.30ಕ್ಕೆ ಸೋಪಾನ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಿತು. ಸಂಜೆ 6 ರಿಂದ ಬದಿಯಡ್ಕದ ಯಕ್ಷ ವಿಹಾರಿ ತಂಡದವರಿಂದ ಯಕ್ಷಗಾನ ತಾಳಮದ್ದಳೆ ನಡೆಯಿತು. 7 ರಿಂದ ಅಂಕುರಪೂಜೆ, ಸೋಪಾನ ಪೂಜೆ, ರಾತ್ರಿ 8 ರಿಂದ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. 


           ಇಂದಿನ ಕಾರ್ಯಕ್ರಮ: ಶನಿವಾರ ಬೆಳಿಗ್ಗೆ 6 ರಿಂದ ಗಣಪತಿಹೋಮ, ಶಾಂತಿಹೋಮ, ಪ್ರಾಯಶ್ಚಿತ್ತ ಹೋಮ, ತತ್ವಹೋಮ, ತತ್ವಕಲಶ, ಕುಂಭೇಷ ಕರ್ಕರೀ ಪೂಜೆ, ಅಂಕುರಪೂಜೆಗಳು ನಡೆಯಲಿವೆ. 10.30 ರಿಂದ ವಿದುಷಃ ರಾಧಾಮುರಳೀಧರ ಕಾಸರಗೋಡು ಅವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಚೇರಿ ನಡೆಯಲಿದೆ. 12.30 ಕ್ಕೆ ಸೋಪಾನಪೂಜೆ, ಮಂಟಪ ಸಂಸ್ಕಾರ, ಬ್ರಹ್ಮಕಲಶಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. ಸಂಜೆ 6 ರಿಂದ ಭಜನೆ, ಪರಿಕಲಶ ಪೂಜೆ, ಅಧಿವಾಸ ಹೋಮ, ಅಧಿವಾಸ ಬಲಿ, ಕಲಶಾಧಿವಾಸ, ಸೋಪಾನ ಪೂಜೆ, ಮಹಾಬಲಿ ಪೀಠಾಧಿವಾಸ ವಿಧಿಗಳು ನಡೆಯಲಿವೆ. ರಾತ್ರಿ 8 ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. 




Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries