HEALTH TIPS

3 ವರ್ಷಗಳಲ್ಲಿ 40 ಲಕ್ಷಕ್ಕೂ ಹೆಚ್ಚು ಕ್ಯಾನ್ಸರ್‌ ಪ್ರಕರಣ ಪತ್ತೆ: ಮಾಂಡವಿಯಾ

           ನವದೆಹಲಿ: 2018ರಿಂದ 2020ರ ಅವಧಿಯಲ್ಲಿ ದೇಶದಲ್ಲಿ 40 ಲಕ್ಷಕ್ಕೂ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಶುಕ್ರವಾರ ತಿಳಿಸಿದೆ.

         ಇದೇ ಅವಧಿಯಲ್ಲಿ ದೇಶದಲ್ಲಿ 22.54 ಲಕ್ಷ ಜನರು ಈ ಕಾಯಿಲೆಯಿಂದಾಗಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್‌ ಮಾಂಡವಿಯಾ ಸದನಕ್ಕೆ ತಿಳಿಸಿದರು.

           2020ರಲ್ಲಿ 13,92,179, 2019ರಲ್ಲಿ 13,58,415 ಹಾಗೂ 2018ರಲ್ಲಿ 13,25,232 ಕ್ಯಾನ್ಸರ್‌ ಪ್ರಕರಣಗಳು ವರದಿಯಾಗಿವೆ ಎಂದು ಅವರು ಮಾಹಿತಿ ನೀಡಿದರು.

            ಆಯುಷ್ಮಾನ್‌ ಭಾರತ್ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಆರೋಗ್ಯ ಕೇಂದ್ರಗಳಲ್ಲಿ ಕ್ಯಾನ್ಸರ್‌ ಪತ್ತೆ ಸೇವೆ ಲಭ್ಯ ಇದೆ. ಆಯುಷ್ಮಾನ್‌ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ ಕ್ಯಾನ್ಸರ್‌ಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದರು.

            ಕ್ಯಾನ್ಸರ್‌ ಸೇರಿದಂತೆ ಜೀವಕ್ಕೆ ಎರವಾಗುವ ಕಾಯಿಲೆಗಳಿಂದ ಬಳಲುವವರು ಬಿಪಿಎಲ್‌ ಕುಟುಂಬಕ್ಕೆ ಸೇರಿದವರಾಗಿದ್ದರೆ, ಅವರಿಗೆ ರಾಷ್ಟ್ರೀಯ ಆರೋಗ್ಯ ನಿಧಿ ಹಾಗೂ ಆರೋಗ್ಯ ಸಚಿವರ ವಿವೇಚನಾ ನಿಧಿಯಿಂದ (ಎಚ್‌ಎಂಡಿಜಿ) ಹಣಕಾಸು ನೆರವು ನೀಡಲಾಗುತ್ತದೆ ಎಂದೂ ಸಚಿವ ಮಾಂಡವಿಯಾ ತಿಳಿಸಿದರು.

             ಎಚ್‌ಎಂಡಿಜಿಯಡಿ ಸದ್ಯ ₹ 20 ಲಕ್ಷ ಇದೆ. ಆದರೆ, ಈ ವರೆಗೆ ಯಾರೂ ನೆರವು ಕೋರಿ ಅರ್ಜಿ ಸಲ್ಲಿಸದ ಕಾರಣ, ಈ ಹಣ ಬಳಕೆಯಾಗಿಯೇ ಇಲ್ಲ ಎಂದರು.

          ಎಚ್‌ಎಂಡಿಜಿಯಡಿ ಗರಿಷ್ಠ ₹ 1.25 ಲಕ್ಷ ನೆರವು ನೀಡಲು ಅವಕಾಶ ಇದೆ. ರಾಷ್ಟ್ರೀಯ ಆರೋಗ್ಯ ನಿಧಿಯಡಿ ಗರಿಷ್ಠ ₹ 15 ಲಕ್ಷದ ವರೆಗೆ ನೀಡಬಹುದಾಗಿದೆ ಎಂದೂ ಅವರು ತಿಳಿಸಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries