ತಿರುವನಂತಪುರ: ರಾಜ್ಯದಲ್ಲಿ ಇಂದು ಕೋವಿಡ್ ಬಾಧಿತರ ಸಂಖ್ಯೆ ಮತ್ತೆ ಐವತ್ತು ಸಾವಿರಕ್ಕಿಂತ ಮೇಲೇರಿದ್ದು, 51,887 ಮಂದಿಗೆ ಸೋಂಕು ದೃಢಪಟ್ಟಿದೆ. ಎರ್ನಾಕುಳಂ 9331, ತಿರುವನಂತಪುರ 6121, ಕೊಟ್ಟಾಯಂ 3601, ಪಾಲಕ್ಕಾಡ್ 3049, ಅಲಪುಳ 29678, ಇಡುಕ್ಕಿ 2678, ಕಣ್ಣೂರು 2081, ವಯನಾಡ್ 1000, ಕಾಸರಗೋಡು 552 ಎಂಬಂತೆ ಕೋವಿಡ್ ಪತ್ತೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 1,21,048 ಮಾದರಿಗಳನ್ನು ಪರೀಕ್ಷಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 5,32,995 ಮಂದಿ ಜನರು ನಿಗಾದಲ್ಲಿದ್ದಾರೆ. ಇವರಲ್ಲಿ 5,21,352 ಮಂದಿ ಮನೆ/ ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದಾರೆ ಮತ್ತು 11,643 ಮಂದಿ ಆಸ್ಪತ್ರೆಯ ನಿಗಾದಲ್ಲಿದ್ದಾರೆ. ಒಟ್ಟು 1330 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ 3,67,847 ಕೊರೋನಾ ಪ್ರಕರಣಗಳಲ್ಲಿ, ಕೇವಲ 3.2 ಪ್ರತಿಶತದಷ್ಟು ಜನರು ಆಸ್ಪತ್ರೆ / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಕೋವಿಡ್ ಬಾಧಿಸಿ 24 ಮಂದಿ ಬಲಿಯಾಗಿದ್ದಾರೆ. ಇದಲ್ಲದೆ, ಹಿಂದಿನ ದಿನಗಳಲ್ಲಿ ದಾಖಲೆಗಳನ್ನು ತಡವಾಗಿ ಸ್ವೀಕರಿಸಿದ ಕಾರಣ 118 ಸಾವುಗಳು ಮತ್ತು ಸುಪ್ರೀಂ ಕೋರ್ಟ್ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ್ದರಿಂದ 1,063 ಸಾವುಗಳು ವರದಿಯಾಗಿವೆ. ಇದರಿಂದ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 55,600ಕ್ಕೆ ಏರಿಕೆಯಾಗಿದೆ.
ಇಂದು,ಸೋಂಕು ಪತ್ತೆಯಾದವರಲ್ಲಿ 221 ಮಂದಿ ಜನರು ಹೊರ ರಾಜ್ಯದವರು. 47,612 ಮಂದಿ ಜನರು ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ. 3602 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. ಇಂದು 462 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಸೋಂಕು ದೃಢಪಡಿಸಲಾಗಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದವರಲ್ಲಿ 40,383 ಮಂದಿ ಚೇತರಿಸಿಕೊಂಡಿದ್ದಾರೆ. ತಿರುವನಂತಪುರ 5763, ಕೊಲ್ಲಂ 2847, ಪತ್ತನಂತಿಟ್ಟ 1746, ಆಲಪ್ಪುಳ 1114, ಕೊಟ್ಟಾಯಂ 3273, ಇಡುಕ್ಕಿ 1222, ಎರ್ನಾಕುಲಂ 8808, ತ್ರಿಶೂರ್ 3910, ಪಾಲಕ್ಕಾಡ್ 1480, ಮಲಪ್ಪುರಂ 2375, ಕೋಝಿಕ್ಕೋಡ್ 4355, ವಯನಾಡ್ 497, ಕಣ್ಣೂರು 2186, ಕಾಸರಗೋಡು 807 ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ 3,67,847 ಮಂದಿಗೆ ಸೋಂಕು ದೃಢಪಟ್ಟಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 56,53,376 ಮಂದಿ ಕೊರೊನಾದಿಂದ ಮುಕ್ತರಾಗಿದ್ದಾರೆ.