ತಿರುವನಂತಪುರ: ರಾಜ್ಯದಲ್ಲಿ ಇಂದು 52,199 ಮಂದಿಗೆ ಕೋವಿಡ್ ಸೋಂಕು ದೃಢಪಡಿಸಲಾಗಿದೆ. ಎರ್ನಾಕುಳಂ 11,224, ತಿರುವನಂತಪುರ 5701, ತ್ರಿಶೂರ್ 4843, ಕೋಝಿಕ್ಕೋಡ್ 4602, ಕೊಟ್ಟಾಯಂ 4192, ಕೊಲ್ಲಂ 3828, ಮಲಪ್ಪುರಂ 3268, ಆಲಪ್ಪುಳ 2939, ಪಾಲಕ್ಕಾಡ್ 2598, ಪತ್ತನಂತಿಟ್ಟು 2475, ಕಣ್ಣೂರು 2295, ಇಡುಕ್ಕಿ 1757, ವಯನಾಡ್ 1602, ಕಾಸರಗೋಡು 875 ಎಂಬಂತೆ ಕೋವಿಡ್ ಪತ್ತೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 1,24,611 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಸ್ತುತ 5,32,051 ಮಂದಿ ಜನರು ನಿಗಾದಲ್ಲಿದ್ದಾರೆ. ಇವರಲ್ಲಿ 5,20,612 ಮಂದಿ ಮನೆ/ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದಾರೆ ಮತ್ತು 11,439 ಮಂದಿ ಆಸ್ಪತ್ರೆಗಳಲ್ಲಿದ್ದಾರೆ. ಒಟ್ಟು 1277 ಮಂದಿ ಹೊಸದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ, 3,77,823 ಕೋವಿಡ್ ಪ್ರಕರಣಗಳಲ್ಲಿ, ಕೇವಲ 3 ಶೇ. ಜನರು ಮಾತ್ರ ಆಸ್ಪತ್ರೆ / ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 29 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಅಲ್ಲದೆ, ಹಿಂದಿನ ದಿನಗಳಲ್ಲಿ ದಾಖಲೆಗಳ ವಿಳಂಬದಿಂದ 136 ಸಾವುಗಳು ಮತ್ತು ಸುಪ್ರೀಂ ಕೋರ್ಟ್ನ ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರವು ಮೇಲ್ಮನವಿ ಸಲ್ಲಿಸಿದ್ದರಿಂದ 335 ಸಾವುಗಳು ವರದಿಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 56,100ಕ್ಕೆ ಏರಿಕೆಯಾಗಿದೆ.
ಇಂದು, ಸೋಂಕು ಪತ್ತೆಯಾದವರಲ್ಲಿ 3,033 ಮಂದಿ ಜನರು ಹೊರ ರಾಜ್ಯದವರು. 44,956 ಮಂದಿ ಜನರು ಸಂಪರ್ಕದಿಂದ ಸೋಂಕಿಗೆ ಒಳಗಾಗಿದ್ದಾರೆ. 3740 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. ಇಂದು 470 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ದೃಢಪಡಿಸಲಾಗಿದೆ.
ಒಟ್ಟು 41,715 ಮಂದಿ ಜನರು ರೋಗನಿರ್ಣಯ ಮತ್ತು ಚಿಕಿತ್ಸೆಪಡೆದು ಚೇತರಿಸಿಕೊಂಡಿದ್ದಾರೆ. ತಿರುವನಂತಪುರ 2175, ಕೊಲ್ಲಂ 3900, ಪತ್ತನಂತಿಟ್ಟ 1810, ಆಲಪ್ಪುಳ 2406, ಕೊಟ್ಟಾಯಂ 3043, ಇಡುಕ್ಕಿ 1267, ಎರ್ನಾಕುಳಂ 11,021, ತ್ರಿಶೂರ್ 2010, ಪಾಲಕ್ಕಾಡ್ 3504, ಮಲಪ್ಪುರಂ 2095, ಕೋಝಿಕ್ಕೋಡ್ 4114, ವಯನಾಡ್ 1110, ಕಣ್ಣೂರು 2333, ಕಾಸರಗೋಡು 937 ಎಂಬಂತೆ ಗುಣಮುಖರಾಗಿದ್ದಾರೆ. ಇದರೊಂದಿಗೆ 3,77,823 ಮಂದಿಗೆ ಸೋಂಕು ದೃಢಪಟ್ಟಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೆ 56,95,091 ಮಂದಿ ಜನರು ಕೊರೋನಾದಿಂದ ಮುಕ್ತರಾಗಿದ್ದಾರೆ.