HEALTH TIPS

ಸಂಜಿತ್ ಹತ್ಯೆ; ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಪಾತ್ರ; ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಸಂಜಿತ್ ಪತ್ನಿ ನ್ಯಾಯಾಲಯಕ್ಕೆ

                    ಕೊಚ್ಚಿ: ಆರ್‍ಎಸ್‍ಎಸ್ ಕಾರ್ಯಕರ್ತ ಸಂಜಿತ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸಂಜಿತ್ ಪತ್ನಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಂಜಿತ್‍ನನ್ನು ಪತ್ನಿಯ ಎದುರೇ ಇಸ್ಲಾಮಿ ಉಗ್ರರು ಹತ್ಯೆಗೈದಿದ್ದರು. 

                  ಸಂಜಿತ್ ಹತ್ಯೆಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಕೈವಾಡವಿದ್ದು, ರಾಜ್ಯದ ಹೊರಗೆ ತನಿಖೆ ನಡೆಸಬೇಕು. ಹೀಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಅರ್ಜಿದಾರರು ಕೇಳಿದ್ದಾರೆ.

                 ಆದರೆ, ಪ್ರಕರಣ ನಿರ್ಣಾಯಕ ಹಂತದಲ್ಲಿದ್ದು, ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

ತನಿಖೆ ಸರಿಯಾದ ಹಾದಿಯಲ್ಲಿದೆ, ಇನ್ನೂ ಎರಡು ವಾರಗಳು ಬಾಕಿ ಉಳಿದಿವೆ .ಈ ಮಧ್ಯೆ ಇದೀಗ ಅಂತಿಮ ವರದಿಯನ್ನು ಸಲ್ಲಿಸಲಾಗುವುದು ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿದೆ.

             ಈ ಪ್ರಕರಣದಲ್ಲಿ ಪೋಲೀಸರು, ಸರ್ಕಾರ ಮತ್ತು ಪಾಪ್ಯುಲರ್ ಫ್ರಂಟ್ ಶಾಮೀಲಾಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries