HEALTH TIPS

ಪೂರ್ವಗ್ರಹಪೀಡಿತ ಪತ್ರಕರ್ತರ ಮಾನ್ಯತೆ ರದ್ದು: ಕೇಂದ್ರ ಸರ್ಕಾರದ ನೂತನ ಮಾರ್ಗಸೂಚಿ

                ನವದೆಹಲಿ: ಪತ್ರಕರ್ತರು ಪೂರ್ವಗ್ರಹಪೀಡಿತರಾಗಿ ವರ್ತಿಸಿದರೆ ಮಾನ್ಯತೆ ರದ್ದು ಮಾಡುವ ಕುರಿತು ಕೇಂದ್ರ ಸರ್ಕಾರ ನೂತನ ಮಾರ್ಗಸೂಚಿಯಲ್ಲಿ ಹೇಳಿದೆ.

         ಈ ಕುರಿತಂತೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮಾಹಿತಿ ನೀಡಿದ್ದು, 'ರಾಷ್ಟ್ರದ ಭದ್ರತೆ, ಸಾರ್ವಭೌಮತೆ ಹಾಗೂ ಏಕತೆಯಲ್ಲದೇ, ಸಾರ್ವಜನಿಕ ಸುವ್ಯವಸ್ಥೆ, ನೈತಿಕತೆ ವಿಷಯದಲ್ಲಿ ಪತ್ರಕರ್ತರು ಪೂರ್ವಗ್ರಹಪೀಡಿತರಂತೆ ನಡೆದುಕೊಂಡಲ್ಲಿ, ಸರ್ಕಾರ ನೀಡಿರುವ ಮಾನ್ಯತೆಯನ್ನು ಅವರು ಕಳೆದುಕೊಳ್ಳಬೇಕಾಗುತ್ತದೆ ಎಂದು ತಿಳಿಸಿದೆ.

            ಸಚಿವಾಲಯ ಸೋಮವಾರ ಬಿಡುಗಡೆ ಮಾಡಿರುವ ‘ಕೇಂದ್ರೀಯ ಮಾಧ್ಯಮ ಮಾನ್ಯತೆ ಮಾರ್ಗಸೂಚಿಗಳು–2022’ರಲ್ಲಿ ಉಲ್ಲೇಖಿಸಿರುವ ನೂತನ ಮಾರ್ಗಸೂಚಿಗಳಲ್ಲಿ ಈ ವಿಷಯ ತಿಳಿಸಲಾಗಿದೆ ಎಂದು ತಿಳಿದುಬಂದಿದೆ.

          ‘ಮಿತ್ರ ರಾಷ್ಟ್ರಗಳೊಂದಿಗಿನ ಸಂಬಂಧಗಳ ಮೇಲೆ ಪರಿಣಾಮ ಬೀರುವುದು, ನ್ಯಾಯಾಂಗ ನಿಂದನೆ, ಮಾನನಷ್ಟ ಅಥವಾ ಅಪರಾಧಕ್ಕೆ ಪ್ರಚೋದಿಸುವಂತಹ ವಿಷಯಗಳಿಗೆ ಸಂಬಂಧಿಸಿದಂತೆಯೂ ಪತ್ರಕರ್ತರು ಪೂರ್ವಗ್ರಹಪೀಡಿತರಂತೆ ವರ್ತಿಸಬಾರದು. ಇಂಥ ವರ್ತನೆ ಕಂಡುಬಂದಲ್ಲಿ ಅವರಿಗೆ ನೀಡಿರುವ ವಿಶೇಷ ಮಾನ್ಯತೆಯನ್ನು ರದ್ದುಗೊಳಿಸಬಹುದಾಗಿದೆ ಎಂದು  ಹೇಳಿದೆ.

           ಅಂತೆಯೇ ಆನ್ಲೈನ್‌ ಸುದ್ದಿ ವೇದಿಕೆಗಳಲ್ಲಿ ಕಾರ್ಯ ನಿರ್ವಹಿಸುವ ಪತ್ರಕರ್ತರಿಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಸಹ ಬಿಡುಗಡೆ ಮಾಡಲಾಗಿದ್ದು, ಸುದ್ದಿಗಳನ್ನು ಸಂಗ್ರಹಿಸಿ, ಜನರಿಗೆ ಒದಗಿಸುವ ಕಾರ್ಯದಲ್ಲಿ ನಿರತರಾದವರನ್ನು (ಅಗ್ರಿಗೇಟರ್) ಮಾನ್ಯತೆಗಾಗಿ ಪರಿಗಣಿಸುವುದಿಲ್ಲ. ಮಾನ್ಯತೆಯನ್ನು ಪಡೆದಿರುವ ಮಾಧ್ಯಮ ಪ್ರತಿನಿಧಿಗಳು ಸಾರ್ವಜನಿಕ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿನ ತಮ್ಮ ವೈಯಕ್ತಿಕ ವಿವರಗಳಲ್ಲಿ, ವಿಜಿಟಿಂಗ್‌ ಕಾರ್ಡ್‌ಗಳಲ್ಲಿ, ಲೆಟರ್‌ ಹೆಡ್‌ಗಳಲ್ಲಿ ಅಥವಾ ಯಾವುದೇ ಮುದ್ರಿತ ಸಾಮಗ್ರಿಗಳಲ್ಲಿ ‘ಭಾರತ ಸರ್ಕಾರದಿಂದ ಮಾನ್ಯತೆ ಹೊಂದಲಾಗಿದೆ’ ಎಂಬುದಾಗಿ ಬರೆದುಕೊಳ್ಳುವಂತಿಲ್ಲ ಎಂದೂ ಸಚಿವಾಲಯ ಸ್ಪಷ್ಟಪಡಿಸಿದೆ.   


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries