HEALTH TIPS

ಶ್ರೀಲಂಕಾ ಬಿಕ್ಕಟ್ಟು: ಸಿಂಗಾಪುರಕ್ಕೆ ತೆರಳಿದ ನಂತರ ಅಧ್ಯಕ್ಷ ಸ್ಥಾನಕ್ಕೆ ಗೋಟಬಯ ರಾಜೀನಾಮೆ ಸಲ್ಲಿಕೆ

Top Post Ad

Click to join Samarasasudhi Official Whatsapp Group

Qries

             ಕೊಲಂಬೋ: ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸಿರುವ ಶ್ರೀಲಂಕಾದಲ್ಲಿ ತೀವ್ರ ಪ್ರತಿಭಟನೆ ಭುಗಿಲೆಳುತ್ತಿದ್ದಂತೆ ಮಾಲ್ಡೀವ್ಸ್ ಗೆ ಪಲಾಯನವಾಗಿದ್ದ  ಅಧ್ಯಕ್ಷ  ಗೋಟಬಯ ರಾಜಪಕ್ಸ ಗುರುವಾರ ಕೊನೆಗೂ ತನ್ನ ಸ್ಥಾನಕ್ಕೆ  ರಾಜೀನಾಮೆ ನೀಡಿದ್ದಾರೆ.

               ಸ್ಪೀಕರ್ ಕಚೇರಿ ಪ್ರಕಾರ  ಗೋಟಬಯ ತನ್ನ ಪತ್ನಿ ಹಾಗೂ ಇಬ್ಬರು ಅಂಗರಕ್ಷಕರೊಂದಿಗೆ ಮಾಲ್ಡೀವ್ಸ್ ನಿಂದ ಸಿಂಗಾಪುರಕ್ಕೆ ತೆರಳುತ್ತಿದ್ದಂತೆ ಶ್ರೀಲಂಕಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ವರದಿಯಾಗಿದೆ. ಎಎಫ್ ಪಿ ಪತ್ರಕರ್ತರ ಪ್ರಕಾರ ರಾಜಪಕ್ಸ ಮಾಲ್ಡೀವ್ಸ್‌ನಿಂದ  ಸೌದಿ ಏರ್ ಲೈನ್ಸ್ ವಿಮಾನದಲ್ಲಿ ರಾತ್ರಿ 7-17ಕ್ಕೆ ಸಿಂಗಾಪುರದ ಚಾಂಗಿ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ.

                ಗೋಟಬಯ ಸಿಂಗಾಪುರ ಕಡೆಗೆ ತೆರಳುತ್ತಿದ್ದಾರೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆಯೇ ಪತ್ರಕರ್ತರು ಚಾಂಗಿ ವಿಮಾನ ನಿಲ್ದಾಣದಲ್ಲಿ ಜಮಾಯಿಸಿದ್ದರು. ಆದರೆ, ಗುರುವಾರ ಅವರು ತೆರಳುವುದು ಕಾಣಲಿಲ್ಲ. 

               ರಾಜಪಕ್ಸ ಅವರು ಸಿಂಗಾಪುರ ಪ್ರವೇಶಿಸಲು ಅವಕಾಶ ನೀಡಲಾಗಿತ್ತು. ಆದರೆ, ಅದು ಖಾಸಗಿ ಭೇಟಿಯಾಗಿತ್ತು. ಅವರು ಯಾವುದೇ ಭದ್ರತೆಯನ್ನು ಕೇಳಿಲ್ಲ, ನಾವು ಕೊಟ್ಟಿಲ್ಲ, ಸಿಂಗಾಪುರದಲ್ಲಿ ಸಾಮಾನ್ಯವಾಗಿ ಭದ್ರತೆ ಮನೆಗೆ ಅವಕಾಶವಿಲ್ಲ ಎಂದು ಸಿಂಗಾಪುರ ವಿದೇಶಾಂಗ ಸಚಿವಾಲಯ ಖಚಿತಪಡಿಸಿದೆ.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries