HEALTH TIPS

ಕಾಂಗ್ರೆಸ್‌ ಸರ್ಕಾರ ಶಂಕುಸ್ಥಾಪನೆ ಮಾಡಿ, ಕಾಮಗಾರಿ ಮರೆಯುತ್ತಿತ್ತು: ಮೋದಿ

Top Post Ad

Click to join Samarasasudhi Official Whatsapp Group

Qries

 

              ಬಿಸ್ಲಾಪುರ: ಕಾಂಗ್ರೆಸ್‌ ಸರ್ಕಾರ ಸಾಕಷ್ಟು ಯೋಜನೆಗಳ ಶಂಕು ಸ್ಥಾಪನೆ ಮಾಡಿ, ಚುನಾವಣೆ ಬಳಿಕ ಯೋಜನೆ ಪೂರ್ಣಗೊಳಿಸಲು ಮರೆತುಬಿಡುತ್ತಿತ್ತು. ಆದರೆ ತಮ್ಮ ಸರ್ಕಾರ ಶಂಕುಸ್ಥಾಪನೆಯ ಜೊತೆಗೆ ಯೋಜನೆಗಳ ಉದ್ಘಾಟನೆಯನ್ನೂ ನೆರವೇರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

              ಇಲ್ಲಿನ ಲಹ್ನು ಮೈದಾನದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನರು ರಾಜ್ಯ ಹಾಗೂ ಕೇಂದ್ರ ಎರಡರಲ್ಲಿಯೂ ಬಿಜೆಪಿಯನ್ನು ಆಯ್ಕೆ ಮಾಡಿರುವುದರಿಂದ ಈ ಅಭಿವೃದ್ಧಿ ಸಾಧ್ಯವಾಗಿದೆ ಎಂದರು.

                    ಎಐಐಎಂಎಸ್‌(ಏಮ್ಸ್‌) ಮತ್ತು ಹೈಡ್ರೋ ಎಂಜಿನಿಯರಿಂಗ್‌ ಕಾಲೇಜಿಗೆ ಪ್ರಧಾನಿ ಚಾಲನೆ ನೀಡಿದರು. ದೇಶವನ್ನು ರಕ್ಷಣೆ ಮಾಡುವಲ್ಲಿ ಹಿಮಾಚಲ ಪ್ರದೇಶ ಮಹತ್ವದ ಪಾತ್ರ ವಹಿಸಿದೆ. ಈಗ ಏಮ್ಸ್‌ ಬಿಸ್ಲಾಪುರದೊಂದಿಗೆ ಜೀವ ರಕ್ಷಣೆಯಲ್ಲಿಯೂ ಪ್ರಮುಖ ಪಾತ್ರ ವಹಿಸಲಿದೆ ಎಂದು ಪ್ರಧಾನಿ ಹೇಳಿದರು.

             ಮುಂದಿನ ಎರಡು ತಿಂಗಳೊಳಗೆ ರಾಜ್ಯದಲ್ಲಿ ಚುನಾವಣೆ ನಡೆಯಲಿದ್ದು, ಅದರ ಬೆನ್ನಲ್ಲೇ ಪ್ರಧಾನಿ ಬಹಿರಂಗ ಸಭೆ ಆಯೋಜಿಸಲಾಗಿತ್ತು.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries