HEALTH TIPS

'ವಿಳಿಂಞ ಬಂದರು ಬೆಂಬಲಿಸಿ ಪ್ರತಿಭಟನೆಗೆ ಅವಕಾಶ ನೀಡಲ್ಲ'

Top Post Ad

Click to join Samarasasudhi Official Whatsapp Group

Qries

 

             ವಿಳಿಂಞ: ಗೌತಮ್‌ ಅದಾನಿ ಸಮೂಹದ ವಿಳಿಂಞ ಬಂದರು ನಿರ್ಮಾಣ ಬೆಂಬಲಿಸಿ ಹಿಂದೂ ಗುಂಪು ಪ್ರತಿಭಟನಾ ರ‍್ಯಾಲಿ ನಡೆಸಲು ಅವಕಾಶ ನೀಡುವುದಿಲ್ಲ ಎಂದು ಕೇರಳ ಪೊಲೀಸರು ಬುಧವಾರ ತಿಳಿಸಿದ್ದಾರೆ.

              ಬಂದರು ನಿರ್ಮಾಣದಿಂದ ಉದ್ಯೋಗ ಸೃಷ್ಟಿಯಾಗುತ್ತದೆಂದು ಹಿಂದೂ ಯುನೈಟೆಡ್‌ ಫ್ರಂಟ್ ಸದಸ್ಯರು ವಿಳಿಂಞ ಬಂದರಿನ ವರೆಗೆ ಯಾತ್ರೆ ನಡೆಸುವುದಾಗಿ ಘೋಷಿಸಿದ್ದಾರೆ.

                 'ಹಿಂದೂ ಯುನೈಟೆಡ್‌ ಫ್ರಂಟ್ ರ‍್ಯಾಲಿಗೆ ಅವಕಾಶ ನಿರಾಕರಿಸಲಾಗಿದೆ. ಆದೇಶ ಉಲ್ಲಂಘಿಸಿದಲ್ಲಿ ರ‍್ಯಾಲಿಯನ್ನು ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮವನ್ನೂ ಕೈಗೊಳ್ಳಲಾಗಿದೆ' ಎಂದು ತಿರುವನಂತಪುರ ಡಿಸಿಪಿ ಅಜಿತ್ ವಿ. ತಿಳಿಸಿದ್ದಾರೆ.

          ಬಂದರು ನಿರ್ಮಾಣದಿಂದ ಭೂಸವಕಳಿ ಉಂಟಾಗಿ ತಮ್ಮ ಜೀವನೋಪಾಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಮೀನುಗಾರರು ಆರೋಪಿಸಿ ಪ್ರತಿಭಟಿಸುತ್ತಿರುವುದರಿಂದ ಸುಮಾರು ನಾಲ್ಕು ತಿಂಗಳಿನಿಂದ ಕಾಮಗಾರಿಯು ಸ್ಥಗಿತಗೊಂಡಿದೆ.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries