ಬರುಯ್ಪುರ್: ಹಳ್ಳಿಯ ಜಾತ್ರೆಯಲ್ಲಿ ಬಲೂನಿಗೆ ಗಾಳಿ ತುಂಬಲು ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 4 ಮಂದಿ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ.
ಕೋಲ್ಕತ್ತದಿಂದ 50 ಕಿ.ಮೀ ದೂರದ ಜೊಯ್ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಂತ್ರಾ ಹಳ್ಳಿಯಲ್ಲಿ ಭಾನುವಾರ ರಾತ್ರಿ 10.10ರ ಸುಮಾರಿಗೆ ಘಟನೆ ನಡೆದಿದೆ.