HEALTH TIPS

ಬ್ರಹ್ಮಪುರಂ ಅಗ್ನಿ ಅವಘಡಕ್ಕೆ ರಾಜ್ಯ ಸರ್ಕಾರವೇ ಹೊಣೆ: 500 ಕೋಟಿ ವರೆಗೆ ದಂಡ ವಿಧಿಸಬಹುದು: ರಾಷ್ಟ್ರೀಯ ಹಸಿರು ನ್ಯಾಯಮಂಡಳಿ


              ನವದೆಹಲಿ: ಬ್ರಹ್ಮಪುರಂ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ರಾಜ್ಯ ಸರ್ಕಾರವನ್ನು ಟೀಕಿಸಿದೆ.
          ಅಗತ್ಯ ಬಿದ್ದರೆ ರಾಜ್ಯ ಸರಕಾರಕ್ಕೆ 500 ಕೋಟಿ ದಂಡ ವಿಧಿಸಲಾಗುವುದು ಎಂದೂ ನ್ಯಾಯಪೀಠ ಎಚ್ಚರಿಸಿದೆ. ಬ್ರಹ್ಮಪುರಂ ನ ಅಕ್ಷಮ್ಯ ಅಪರಾಧಕ್ಕೆ ಸರಕಾರವೇ ಸಂಪೂರ್ಣ ಹೊಣೆ ಎಂದು ನ್ಯಾಯಮೂರ್ತಿ ಎ.ಕೆ.ಗೋಯಲ್ ನೇತೃತ್ವದ ಪೀಠ ಹೇಳಿದೆ.
           ನ್ಯಾಯಮೂರ್ತಿ ಎ.ಕೆ.ಗೋಯಲ್ ನೇತೃತ್ವದ ಪೀಠವು ಬ್ರಹ್ಮಪುರಂ ಬೆಂಕಿಗೆ ಸಂಬಂಧಿಸಿದ ಸುದ್ದಿಯನ್ನು ಆಧರಿಸಿ ಸ್ವಯಂ ಪ್ರೇರಣೆಯಿಂದ ವಿಷಯವನ್ನು ಪರಿಗಣಿಸಿದೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿ.ವೇಣು ಕೂಡ ಕಲಾಪದಲ್ಲಿ ಭಾಗಿಯಾಗಿದ್ದರು. ಅವರ ಸಮ್ಮುಖದಲ್ಲಿಯೇ ರಾಜ್ಯ ಸರ್ಕಾರವನ್ನು ತೀವ್ರವಾಗಿ ಟೀಕಿಸಲಾಯಿತು. ಬ್ರಹ್ಮಪುರಂ ಬೆಂಕಿಗೆ ರಾಜ್ಯ ಸರ್ಕಾರವೇ ಹೊಣೆ ಎಂದು ನ್ಯಾಯಮೂರ್ತಿ ಎ.ಕೆ.ಗೋಯಲ್ ಹೇಳಿದ್ದಾರೆ. ಘಟನೆಗೆ ಸರ್ಕಾರವೇ ಸಂಪೂರ್ಣ ಹೊಣೆಯಾಗಿದ್ದು, ಅದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದು ನ್ಯಾಯಮೂರ್ತಿಗಳ ಅಭಿಪ್ರಾಯವಾಗಿತ್ತು.




ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries