ಬದಿಯಡ್ಕ: ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ನೀರ್ಚಾಲು ಮತ್ತು ಮರ್ಚಂಟ್ಸ್ ವೆಲ್ಪೇರ್ ಸೊಸೈಟಿಯ ವಾರ್ಷಿಕ ಮಹಾಸಭೆ ಜು.18 ರಂದು ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 5ರ ವರೆಗೆ ನೀರ್ಚಾಲು ವ್ಯಾಪಾರಿ ಭವನದಲ್ಲಿ ನಡೆಯಲಿದೆ. ನೀರ್ಚಾಲು ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಅಧ್ಯಕ್ಷತೆ ವಹಿಸುವರು. ಕೆವಿವಿಇಎಸ್ ಜಿಲ್ಲಾಧ್ಯಕ್ಷ ಕೆ.ಅಹಮ್ಮದ್ ಶರೀಫ್, ಪ್ರ.ಕಾರ್ಯದರ್ಶಿ ಕೆ.ಜೆ.ಸಜಿ, ಕೋಶಾಧಿಕಾರಿ ಮಾಹಿನ್ ಕೋಳಿಕ್ಕರ, ಜಿಲ್ಲಾ ಉಪಾಧ್ಯಕ್ಷ ಗಣೇಶ್ ಶ್ರೀವತ್ಸ ಭಾಗವಹಿಸುವರು. ಘಟಕದ ಎಲ್ಲಾ ಸದಸ್ಯರು ಅಂದು ಮಧ್ಯಾಹ್ನ 1 ರಿಂದ ಸಂಜೆ 5 ರ ತನಕ ತಮ್ಮ ವ್ಯಾಪಾರ ಘಟಕಗಳನ್ನು ಮುಚ್ಚಿ ಕಡ್ಡಾಯವಾಗಿ ಮಹಾಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಸಂಬಂಧಪಟ್ಟವರು ತಿಳಿಸಿದ್ದಾರೆ.