ನವದೆಹಲಿ: ಭಾರತದ ಆರ್ಥಿಕತೆ ಬ್ಯಾಂಕ್ ಹಾಗೂ ಕಾರ್ಪೊರೇಟ್ ಗಳ ಟ್ವಿನ್ ಬ್ಯಾಲೆನ್ಸ್ ಶೀಟ್ ಸಮಸ್ಯೆಗಳಿಂದ ಟ್ವಿನ್ ಬ್ಯಾಲೆನ್ಸ್ ಶೀಟ್ ಅನುಕೂಲಕ್ಕೆ ಬದಲಾಗಿದೆ, ಇದಕ್ಕೆ ಮೋದಿ ಸರ್ಕಾರದ ಸಂಘಟಿತ ಪ್ರಯತ್ನ ಕಾರಣ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
2022-23 ರಲ್ಲಿ ಸಾರ್ವಜನಿಕ ಕ್ಷೇತ್ರದ ಬ್ಯಾಂಕ್ ಗಳ ಲಾಭ 1.04 ಲಕ್ಷ ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ. 2014 ರಿಂದ ಈ ವರೆಗೆ ಲಾಭ ಮೂರು ಪಟ್ಟು ಹೆಚ್ಚಾಗಿದೆ ಎಂದು ದೆಹಲಿಯಲ್ಲಿ ಪಂಜಾಬ್& ಸಿಂಧ್ ಬ್ಯಾಂಕ್ ನ ಕಾರ್ಪೊರೇಟ್ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಸಚಿವರು ಹೇಳಿದ್ದಾರೆ.