ಕುಂಬಳೆ: ನಾಪತ್ತೆಯಾಗಿದ್ದ ಕುಂಬಳೆ ಪೊಲೀಸ್ ಠಾಣೆ ವ್ಯಾಪ್ತಿಯ ಬಂಬ್ರಾಣ ಕಲ್ಕುಳ ನಿವಾಸಿ ಲೋಕೇಶ್ ಎಂಬವರ ಪುತ್ರ ರಾಜೇಶ್(28)ಅವರ ಮೃತದೇಹ ಉಳ್ಳಾಲ ಪೋಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ಹೊಳೆಯಲ್ಲಿ ಪತ್ತೆಯಾಗಿದೆ. ಸಾರಣೆ ಕೆಲಸ ನಿರ್ವಹಿಸುತ್ತಿದ್ದ ಇವರು, ಸೋಮವಾರ ಸಂಜೆ 5.30ಕ್ಕೆ ಮನೆಯಿಂದ ಹೊರಟಿದ್ದು, ಬಹಳ ಹೊತ್ತಿನ ವರೆಗೆ ವಾಪಸಾಗದ ಹಿನ್ನೆಲೆಯಲ್ಲಿ ಮನೆಯವರು ಮೊಬೈಲ್ಗೆ ಕರೆಮಾಡಿದ್ದಾರೆ. ಈ ಸಂದರ್ಭ ಮೊಬೈಲ್ ಸ್ವಿಚ್ಆಫ್ ಆಗಿದ್ದು, ವಿವಿಧೆಡೆ ಹುಡುಕಾಡಿದರೂ ಪ್ರಯೋಜನವಾಗದಿದ್ದಾಗ ಸಹೋದರ ಶುಭಂ ಪೊಲೀಸರಿಗೆ ದೂರು ನೀಡಿದ್ದರು. ಈ ಮಧ್ಯೆ ಮಂಗಳವಾರ ರಾತ್ರಿ ಹೊಳೆಯಲ್ಲಿ ಮೃತದೇಹ ಪತ್ತೆಯಾಗಿದೆ. ರಾಜೇಶ್ ಸಾವಿನ ಬಗ್ಗೆ ನಿಗೂಢತೆ ವ್ಯಕ್ತವಾಗಿದೆ.