HEALTH TIPS

ಸಿರಿಬಾಗಿಲು ಸಾಂಸ್ಕøತಿಕ ಪ್ರತಿಷ್ಠಾನದಲ್ಲಿ ಮಂಜುನಾದ

Top Post Ad

Click to join Samarasasudhi Official Whatsapp Group

Qries

            ಮಧೂರು: ಮಣಿ ಕೃಷ್ಣಸ್ವಾಮಿ ಅಕಾಡಮಿಯ ಶ್ರೀ ಕ್ಷೇತ್ರ ಧರ್ಮಸ್ಥಳ ಕೃತಿಗಳಾಧರಿತ 14"ನೇ  ಸಂಗೀತ ಕಛೇರಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ಪ್ರತಿμÁ್ಠನದ ಸಹಯೋಗದಲ್ಲಿ ನಡೆಯಿತು.

             ವಿದ್ವಾನ್ ಕಲ್ಮಾಡಿ ಸದಾಶಿವ ಆಚಾರ್ಯ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು. ಗಡಿನಾಡು ಕಾಸರಗೋಡಿನಲ್ಲಿ ಚಾರಿತ್ರಿಕ ಕಾರ್ಯಕ್ರಮ ಆಯೋಜಿಸಿ  ಸಿರಿಬಾಗಿಲು ಪ್ರತಿಷ್ಠಾನದ  ಯೋಜನೆ, ಯೋಚನೆ  ಅದ್ವಿತೀಯವಾದುದು.  ಸಾಂಸ್ಕೃತಿಕ ಹಾಗು ಸಾಹಿತ್ಯ ಕ್ಷೇತ್ರದ ಬೆಳವಣಿಗೆ ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕಾಯಕ ಪ್ರತಿಷ್ಠಾನ ನಡೆಸುತ್ತಿದೆ.  ಶ್ರೀ ಕ್ಷೇತ್ರ ಧರ್ಮಸ್ಥಳದ ಕೃತಿಗಳನ್ನು ಆಧರಿಸಿ ಮಣಿಕೃಷ್ಣ ಸ್ವಾಮಿ ಅಕಾಡಮಿಯು  ಇಂತಹ ಅಪೂರ್ವ ಕೊಡುಗೆ ಸಮಾಜಕ್ಕೆ ನೀಡುತ್ತಿದೆ. ಮಂಜುನಾಥ ಸ್ವಾಮಿಯು  ಅನುಗ್ರಹಿಸಲಿ ಎಂದು ತಿಳಿಸಿದರು.


                 ಕಲ್ಮಾಡಿ ಸದಾಶಿವ ಆಚಾರ್ಯ ಅವರು  ಅಪಾರ ಶಿಷ್ಯ ವೃಂದವನ್ನು  ಹೊಂದಿದ ಸಂಗೀತ ಕ್ಷೇತ್ರದ ಕಾಸರಗೋಡಿನ  ಹಿರಿಯ ವಿದ್ವಾಂಸರಾಗಿದ್ದಾರೆ. 

     ಹಲವು ಕ್ಷೇತ್ರದಲ್ಲಿ ಸಂಗೀತ ಕಾರ್ಯಾಗಾರ ನಡೆಸಿದ್ದೇವೆ. ಯಕ್ಷಗಾನ ಕ್ಷೇತ್ರದ ಪ್ರಧಾನ ಕೇಂದ್ರವಾಗಿರುವ ಗಡಿನಾಡು ಕಾಸರಗೋಡಿನ  ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ಇದೇ ಪ್ರಥಮ. ಇದು ನಮ್ಮ ಸುಯೋಗ ಎಂದು ಮಣಿಕೃಷ್ಣ ಸ್ವಾಮಿ ಅಕಾಡಮಿಯ ಕಾರ್ಯದರ್ಶಿ ನಿತ್ಯಾನಂದ ರಾವ್ ಪೇಜಾವರ ಈ ಸಂದರ್ಭ ಶ್ಲಾಘಿಸಿದರು. 


            ಧಾರ್ಮಿಕ ಮುಂದಾಳು ವೆಂಕಟ್ರಮಣ ಹೊಳ್ಳ ಕಾಸರಗೋಡು, ನಿವೃತ್ತ ಪ್ರಾಧ್ಯಾಪಕ ಪ್ರೊ.ಎ. ಶ್ರೀನಾಥ್, ಮೋಹನದಾಸ್ ಶೆಟ್ಟಿ ಸಿರಿಬಾಗಿಲು, ಸಂಗೀತ ವಿದುಷಿ ರಾಧಾ ಮುರಳೀಧರನ್, ಲಕ್ಷ್ಮೀನಾರಾಯಣ ಕಾವುಮಠ ಉಪಸ್ಥಿತರಿದ್ದರು. 

           ಸಿರಿಬಾಗಿಲು ರಾಮಕೃಷ್ಣ ಮಯ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಬಳಿಕ ಶ್ರೇಯಾ ಕೊಳತ್ತಾಯ ಸುರತ್ಕಲ್, ಉಷಾ ರಾಮಕೃಷ್ಣ ಭಟ್ ಕಿನ್ನಿಗೊಳಿ, ಶರಣ್ಯಾ ಕೆ.ಯಸ್. ಸುರತ್ಕಲ್, ಸುಮೇಧಾ ಕೆ.ಯನ್.ಮೇಧಾ ಉಡುಪ ಮಂಗಳೂರು ಇವರಿಂದ ಮಂಜುನಾದ ಸಂಗೀತ ಕಛೇರಿ ನಡೆಯಿತು. ವಯಲಿನ್ ನಲ್ಲಿ ತನ್ಮಯಿ ಉಪ್ಪಂಗಳ, ಮೃದಂಗದಲ್ಲಿ ಕೌಶಿಕ್ ರಾಮಕೃಷ್ಣನ್ ಕಾಸರಗೋಡು ಸಹಕರಿಸಿದರು.



Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries