HEALTH TIPS

ಗಸ್ತಿನಲ್ಲಿದ್ದ ಪೊಲೀಸರ ಮೇಲೆ ಹಲ್ಲೆ-ಕೊಲೆ ಆರೋಪಿಯೂ ಶಾಮೀಲು, ಒಂದನೇ ಆರೋಪಿ ವಿದೇಶಕ್ಕೆ ಪರಾರಿ

 

                

           ಉಪ್ಪಳ:  ಹಿದಾಯತ್‍ನಗರದಲ್ಲಿ ಗಸ್ತಿನಲ್ಲಿದ್ದ ಮಂಜೇಶ್ವರ ಠಾಣೆ ಎಸ್.ಐ ನೇತೃತ್ವದ ಪೊಲೀಸರ ತಂಡವನ್ನು ಥಳಿಸಿ ಗಾಯಗೊಳಿಸಿದ ಪ್ರಕರಣದ ಅರೋಪಿಗಳಲ್ಲಿ ಕೊಲೆ ಪ್ರಕರಣದ ಆರೋಪಿಯೂ ಶಾಮೀಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಉಪ್ಪಳದಲ್ಲಿ ವರ್ಷಗಳ ಹಿಂದೆ ಕೊಲೆಯಾಗಿರುವ ಕಾಲಿಯಾ ರಫೀಕ್ ಕೊಲೆ ಪ್ರಕರಣದಲ್ಲಿ ಈತ ಆರೋಪಿಯಾಗಿದ್ದುನ್ಯಾಯಾಂಗಬಂಧನದಿಮದ ಇತ್ತೀಚೆಗಷ್ಟೆ ಜಾಮೀನಿನಲ್ಲಿ ಬಿಡುಗಡೆಗೊಂಡು ಊರಿಗೆ ಬಂದಿದ್ದನು. ಪ್ರರಕಣದ ಐದನೇ ಆರೋಪಿ, ಜಿಲ್ಲಾ ಪಂಚಾಯಿತಿ ಸದಸ್ಯ ಗೋಲ್ಡನ್ ಅಬ್ದುಲ್ ರಹಮಾನ್‍ನನ್ನು ಪೊಲೀಸರು ಬಂಧಿಸಿದ್ದರೆ, ಒಂದನೇ ಆರೋಪಿ ಉಪ್ಪಳದ ರಶೀದ್ ಎಂಬಾತ ವಿದೇಶಕ್ಕೆ ಪರಾರಿಯಾಗಿದ್ದಾನೆ. ಈತನನ್ನು ಊರಿಗೆ ಕರೆತರಲು ಲುಕೌಟ್ ನೋಟೀಸು ಜಾರಿಗೆ ಪೊಲೀಸರು ತಯಾರಿ ನಡೆಸುತ್ತಿದ್ದಾರೆ. ತಲೆಮರೆಸಿಕೊಂಡಿರುವ ಇತರ ರೋಪಿಗಳಿಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries