HEALTH TIPS

ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕøತಿಕ ಭವನದಲ್ಲಿ ಉಚಿತ ವೈದ್ಯಕೀಯ ಶಿಬಿರ

              ಕಾಸರಗೋಡು: ಸಾಂಸ್ಕೃತಿಕ ಕ್ಷೇತ್ರದ ಜನಪ್ರಿಯ ಸಂಸ್ಥೆಯಾದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ಉಚಿತ ವೈದ್ಯಕೀಯ ತಪಾಸಣೆ ನಡೆಯಿತು. ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆ ಸಹಯೋಗದೊಂದಿಗೆ ಶಿಬಿರ ಆಯೋಜಿಸಲಾಗಿತ್ತು.

           ಗಡಿನಾಡು ಕಾಸರಗೋಡಿನ ಹಿರಿಯ ವೈದ್ಯ ಡಾ. ಬಿ.ಯಸ್. ರಾವ್ ಶಿಬಿರ ಉದ್ಘಾಟಿಸಿ ಮಾತನಾಡಿ, . ಸಾಂಸ್ಕೃತಿಕವಾಗಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಪ್ರತಿಷ್ಠಾನ ತನ್ನ ಸಾಂಸ್ಕೃತಿಕ ಕ್ಷೇತ್ರದ ಹೊರತಾದ ಚಟುವಟಿಕೆ ಶ್ಲಾಘನೀಯ ಎಂದು ತಿಳಿಸಿದರು.. 

             ಕೆ.ಯಂ.ಸಿ.ಯ ಕ್ಯಾನ್ಸರ್ ತಜ್ಞ ಡಾ.ಅಭಿಷೇಕ್ ಕೃಷ್ಣ ಅವರು ಕ್ಯಾನ್ಸರ್ ಕುರಿತಾದ ಮಾಹಿತಿ ನೀಡಿದರು. ನಾಗರಿಕರು ದುಶ್ಟಟ ದಿಂದ ಮುಕ್ತರಾಗಿ , ಹಿತ ಮಿತವಾದ ಆಹಾರ ಸೇವನೆ ಯಿಂದ ಆರೋಗ್ಯ ಕಾಪಾಡಿಕೊಳ್ಳಬಹುದು.  ಕ್ಯಾನ್ಸರ್ ರೋಗಿಗಳು ಭಯ ಪಡ ಬೇಕಾಗಿಲ್ಲ. ಈಗ ರೋಗ ಲಕ್ಷಣಗಳು ಯಾವ ಹಂತದಲ್ಲಿದ್ದರೂ ಗುಣಪಡಿಸಬಹುದಾಗಿದೆ ಎಂದು ತಿಳಿಸಿದರು. 

               ಕೆ.ಯಂ. ಸಿ.ಯ ಶಿಬಿರದ ಸಂಘಟಕ ಉದಯ ಭಟ್, ಮಣಿಪಾಲ ಕೆ.ಯಂ. ಸಿ.ಯ ನೇತ್ರ ತಜ್ಞೆ ಡಾ.ಶೈಲಜಾ, ಮಂಗಳೂರಿನ ಡಾ. ನಾರಾಯಣ ಮಧೂರು, ಡಾ.ರಾಜಾರಾಮ ದೇವಕಾನ, ಶಿವನಾರಾಯಣ ಗೆಳೆಯರ ವಾಟ್ಸಾಪ್ ಬಳಗದ ಅಧ್ಯಕ್ಷ ವಾಸುದೇವ ಕಾರಂತ ಉಪಸ್ಥತರಿದ್ದರು. 

                   ಇದೇ ಸಂದರ್ಭ ಶಿವನಾರಾಯಣ ಗೆಳೆಯರ ವಾಟ್ಸಾಪ್ ಬಳಗದ ವತಿಯಿಂದ ಸಿರಿಬಾಗಿಲು ಪ್ರತಿಷ್ಠಾನಕ್ಕೆ ಬೃಹತ್ ಮೊತ್ತದ ಪಾತ್ರೆ ಸಾಮಗ್ರಿಗಳನ್ನು ಬಳಗದ ಸದಸ್ಯರು ಜತೆ ಗೂಡಿ ಡಾ.ಬಿ.ಯಸ್. ರಾವ್ ಮುಖಾಂತರ ಪ್ರತಿಷ್ಠಾನದ ಅಧ್ಯಕ್ಷ ರಾಮಕೃಷ್ಣ ಮಯ್ಯ ಸಿರಿಬಾಗಿಲು ಇವರಿಗೆ ಹಸ್ತಾಂತರಿಸಿದರು. ರಾಮಕೃಷ್ಣ ಮಯ್ಯ  ಸ್ವಾಗತಿಸಿದರು. ಜಗದೀಶ ಕೆ.ಕೂಡ್ಲು ಕಾರ್ಯಕ್ರಮ ನಿರೂಪಿಸಿದರು. ಮೋಹನ್ ಕುಮಾರ್ ಶೆಟ್ಟಿ ಸಿರಿಬಾಗಿಲು ವಂದಿಸಿದರು. 

           ಈ ಸಂದರ್ಭ 335 ಕ್ಕೂ ಹೆಚ್ಚು ಶಿಬಿರಾರ್ಥಿಗಳಿಗೆ ಉಚಿತ ವೈದ್ಯಕೀಯ ತಪಾಸಣೆ ನಡೆಸಲಾಯಿತು. ಸಿರಿಬಾಗಿಲು ಪ್ರತಿಷ್ಠಾನದ ವತಿಯಿಂದ ಉಚಿತ ಕನ್ನಡಕ ಹಾಗು ಔಷದಗಳನ್ನು ನೀಡಲಾಯಿತು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries