HEALTH TIPS

41 ರಾಜತಾಂತ್ರಿಕರು ಭಾರತದಿಂದ ವಾಪಸ್: ಕೆನಡಾ

Top Post Ad

Click to join Samarasasudhi Official Whatsapp Group

Qries

 

            ಒಟ್ಟಾವ: 62 ರಾಜತಾಂತ್ರಿಕ ಅಧಿಕಾರಿಗಳ ಪೈಕಿ 41 ಮಂದಿಯನ್ನು ಭಾರತದಿಂದ ವಾಪಸ್‌ ಕರೆಸಿಕೊಳ್ಳಲಾಗಿದೆ ಎಂದು ಕೆನಡಾ ವಿದೇಶಾಂಗ ಸಚಿವೆ ಮೆಲಾನಿಯೆ ಜಾಲಿ ಹೇಳಿದ್ದಾರೆ.

               ಖಾಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಹರದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ವಿಚಾರವಾಗಿ ಉಂಟಾಗಿರುವ ಬಿಕ್ಕಟ್ಟಿನ ನಡುವೆ ಹೆಚ್ಚಿನ ಸಂಖ್ಯೆಯ ರಾಜತಾಂತ್ರಿಕರು ವಾಪಸ್‌ ಆಗಿದ್ದಾರೆ ಎಂದು 'ಕೆನಡಿಯನ್‌ ಬ್ರಾಡ್‌ಕಾಸ್ಟಿಂಗ್‌ ಕಾರ್ಪೊರೇಷನ್‌' ಗುರುವಾರ ವರದಿ ಮಾಡಿದೆ.

               ನಿಜ್ಜರ್‌ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ಆರೋಪಿಸಿದ್ದರು. ಅದಾದ ಬಳಿಕ ಉಭಯ ರಾಷ್ಟ್ರಗಳ ಸಂಬಂಧ ಹಳಸಿದೆ.

                 ಉಭಯ ದೇಶಗಳು ಸಮಾನ ಸಂಖ್ಯೆಯಲ್ಲಿ ರಾಜತಾಂತ್ರಿಕ ಸಿಬ್ಬಂದಿಯನ್ನು ಹೊಂದಿರುವುದು ಅಗತ್ಯ ಎಂದು ಕಳೆದ ತಿಂಗಳು ಪ್ರತಿಪಾದಿಸಿದ್ದ ಭಾರತ, ಹೆಚ್ಚುವರಿ ರಾಜತಾಂತ್ರಿಕರನ್ನು ಅಕ್ಟೋಬರ್‌ 10ರೊಳಗೆ ವಾಪಸ್‌ ಕರೆಸಿಕೊಳ್ಳಬೇಕು ಎಂದು ಕೆನಡಾಗೆ ಸೂಚಿಸಿತ್ತು.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries