HEALTH TIPS

ಊಟಿ ಬಳಿ ಕಣಿವೆಗೆ ಉರುಳಿದ ಪ್ರವಾಸಿಗರ ಬಸ್: 8 ಜನ ಸಾವು

Top Post Ad

Click to join Samarasasudhi Official Whatsapp Group

Qries

              ದಕಮಂಡಲಂ: ಪ್ರವಾಸಿಗರ ಬಸ್‌ ಒಂದು ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಣಿವೆಗೆ ಬಿದ್ದಿದ್ದರಿಂದ 8 ಪ್ರವಾಸಿಗರು ಮೃತಪಟ್ಟು 42 ಜನ ಗಾಯಗೊಂಡಿರುವ ಘಟನೆ ಶನಿವಾರ ಸಂಜೆ ಊಟಿ-ಮೆಟ್ಟುಪಾಳ್ಯಂ ರಸ್ತೆಯಲ್ಲಿ ನಡೆದಿದೆ.

                 ಮೃತರಲ್ಲಿ ಬಹುತೇಕರು ತಮಿಳುನಾಡಿನ ತೆಂಕಾಸಿಯ ಮೂಲದವರಾಗಿದ್ದಾರೆ ಎಂದು ತಿಳಿದು ಬಂದಿದೆ.

               ಗಾಯಾಳುಗಳನ್ನು ಕೂನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಊಟಿಯಿಂದ ಮೆಟ್ಟುಪಾಳ್ಯಂಗೆ ತೆರಳುತ್ತಿದ್ದ ಬಸ್, 9 ನೇ ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು 50 ಅಡಿ ಆಳವಾದ ಕಣಿವೆಗೆ ಉರುಳಿ ಬಿದ್ದಿದೆ. ಘಟನೆಗೆ ಸಂಬಂಧಿಸಿದ ವಿಡಿಯೊ ಮತ್ತು ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ.

                ಬಸ್‌ನಲ್ಲಿ 57 ಪ್ರವಾಸಿಗರು ಇದ್ದರು, ಇವರೆಲ್ಲ ಮೆಟ್ಟುಪಾಳ್ಯಂ ಸುತ್ತಮುತ್ತಲಿನ ಪ್ರವಾಸಿ ತಾಣಗಳನ್ನು ನೋಡಿಕೊಂಡು ವಾಪಸ್ ಊಟಿಗೆ ಬರುವಾಗ ಈ ಘಟನೆ ನಡೆದಿದೆ. ಗಾಯಾಳುಗಳಲ್ಲಿ ನಾಲ್ವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

                ಬಸ್‌ನ ಬ್ರೇಕ್ ಫೇಲಾಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರಿಗೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರು ಸಂತಾಪ ಸೂಚಿಸಿ ತಲಾ ₹ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries