HEALTH TIPS

ರಾಜಕೀಯ ಪ್ರಚಾರಕ್ಕೆ ಭಾರತೀಯ ಸೇನೆಯ ದುರ್ಬಳಕೆ: ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿ

Top Post Ad

Click to join Samarasasudhi Official Whatsapp Group

Qries

           ವದೆಹಲಿ: ಕೇಂದ್ರ ಸರ್ಕಾರವು ತನ್ನ ರಾಜಕೀಯ ಪ್ರಚಾರಕ್ಕಾಗಿ ಭಾರತೀಯ ಸೇನೆಯನ್ನು ಬಹಳ ಕೆಟ್ಟದಾಗಿ ಬಳಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದ್ದು, ಈ ವಿಷಯದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಧ್ಯಪ್ರವೇಶಿಸಿಬೇಕೆಂದು ಆಗ್ರಹಿಸಿದೆ.

          ದೇಶದಾದ್ಯಂತ ಸರ್ಕಾರದ ಯೋಜನೆಗಳನ್ನು ಪ್ರಚಾರ ಮಾಡಲು ಸೇನೆಯು ಸಹಾಯ ಮಾಡುತ್ತದೆ ಎಂದು ಬಿಜೆಪಿ ಹೇಳಿಕೆ ನೀಡಿದ ಬೆನ್ನಲ್ಲೆ ಕಾಂಗ್ರೆಸ್‌ ಕೇಂದ್ರ ಸರ್ಕಾರವನ್ನು ಟೀಕಿಸಿದೆ.


              'ಕಳೆದ ಒಂಬತ್ತೂವರೆ ವರ್ಷಗಳಲ್ಲಿ ಹಣದುಬ್ಬರ, ನಿರುದ್ಯೋಗ ಮತ್ತು ಇತರ ಎಲ್ಲಾ ರಂಗಗಳಲ್ಲಿ ವೈಫಲ್ಯವನ್ನು ಎದುರಿಸಿದ ಪ್ರಧಾನಿ ನರೇಂದ್ರ ಮೋದಿ ಸರ್ಕಾರವು, ಈಗ ಸೇನೆಯಿಂದ ತನ್ನ ರಾಜಕೀಯ ಪ್ರಚಾರವನ್ನು ಪಡೆಯುವ ಅತ್ಯಂತ ಕೆಳಮಟ್ಟದ ಪ್ರಯತ್ನವನ್ನು ಮಾಡುತ್ತಿದೆ. ಸೇನೆಯನ್ನು ರಾಜಕೀಯಗೊಳಿಸುವ ಈ ಪ್ರಯತ್ನವು ಬಹಳ ಅಪಾಯಕಾರಿ ಹೆಜ್ಜೆಯಾಗಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಮ್‌ ರಮೇಶ್‌ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

           'ಭಾರತೀಯ ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್‌ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ನಾವು ವಿನಂತಿಸುತ್ತೇವೆ. ಹಾಗೆಯೇ, ಈ ತಪ್ಪು ಹೆಜ್ಜೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳಲು ಮೋದಿ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು' ಜೈರಾಮ್‌ ರಮೇಶ್‌ ಆಗ್ರಹಿಸಿದರು.

                'ಭಾರತೀಯ ಸೇನೆಯು ಇಡೀ ದೇಶದ ಸೈನ್ಯವಾಗಿದೆ ಮತ್ತು ನಮ್ಮ ಸೇನೆಯು ಎಂದಿಗೂ ದೇಶದ ಆಂತರಿಕ ರಾಜಕೀಯದಲ್ಲಿ ಭಾಗವಹಿಸದಿರುವುದಕ್ಕೆ ನಾವು ಹೆಮ್ಮೆ ಪಡುತ್ತೇವೆ' ಎಂದು ರಮೇಶ್‌ ಹೇಳಿದ್ದಾರೆ.

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries