HEALTH TIPS

ಸಾಲ ಹಗರಣ: ಕೇರಳ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿಯನ್ನು ಬಂಧಿಸಿದ ED

                ಕೊಚ್ಚಿ/ನವದೆಹಲಿ: ವಯನಾಡ್‌ ಸೇವಾ ಸಹಕಾರಿ ಬ್ಯಾಂಕ್‌ವೊಂದರಲ್ಲಿ ನಡೆದ ಸಾಲ ಹಗರಣದಲ್ಲಿ ಭಾಗಿಯಾದ ಆರೋಪದಡಿ ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಕೆ.ಕೆ. ಅಬ್ರಹಾಂ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.

                  ಅಬ್ರಹಾಂ ಅವರು ಬ್ಯಾಂಕ್‌ನಲ್ಲಿ ಅಧ್ಯಕ್ಷರಾಗಿದ್ದ ಸಮಯದಲ್ಲಿ ಹಗರಣ ನಡೆದಿದೆ ಎನ್ನಲಾಗಿದೆ. ಮಂಗಳವಾರ ರಾತ್ರಿ ಅಬ್ರಾಹಮ್‌ ಅವರನ್ನು ವಶಕ್ಕೆ ಪಡೆಯಲಾಗಿದೆ.

                      ಅಬ್ರಹಾಂ ಅವರು ಅಧ್ಯಕ್ಷರಾಗಿದ್ದ ವೇಳೆ ಹಲವು ಹಣಕಾಸು ಅವ್ಯವಹಾರ ನಡೆದಿದೆ ಎಂದು ಸಂತ್ರಸ್ತರು ನೀಡಿದ ದೂರನ್ನು ಆಧರಿಸಿ ಇ.ಡಿ ತನಿಖೆ ಆರಂಭಿಸಿದೆ. ಈಗಾಗಲೇ ಸಾಲ ಹಗರಣದಿಂದಾಗಿ ಹಣ ಕಳೆದುಕೊಂಡ ಸಂತ್ರಸ್ಥರೊಬ್ಬರು ಕೆಲವು ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries