HEALTH TIPS

ಈರುಳ್ಳಿ ರಫ್ತಿಗೆ ಮಾರ್ಚ್‌ 31ರವರೆಗೆ ನಿಷೇಧ: ಕೇಂದ್ರ ಸರ್ಕಾರ

                 ವದೆಹಲಿ (PTI): ದೇಶದಲ್ಲಿ ಈರುಳ್ಳಿ ಬೆಲೆ ನಿಯಂತ್ರಿಸಲು ಮತ್ತು ಲಭ್ಯತೆ ಸುಧಾರಿಸಲು 2024ರ ಮಾರ್ಚ್‌ 31ರವರೆಗೂ ರಫ್ತು ಮಾಡುವುದಕ್ಕೆ ನಿಷೇಧ ಹೇರಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

               ವಿದೇಶಿ ವ್ಯಾಪಾರಗಳ ಮಹಾನಿರ್ದೇಶನಾಲಯವು ಈ ಕುರಿತು ಪ್ರಕಟಣೆ ಹೊರಡಿಸಿದೆ.

ಈ ಆದೇಶ ಹೊರಬೀಳುವುದಕ್ಕೂ ಮುನ್ನ ಆಗಿರುವ ರಫ್ತು ಒಪ್ಪಂದಗಳಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ದೆಹಲಿಯಲ್ಲಿ ಚಿಲ್ಲರೆ ಮಾರಾಟದ ದರ ಕೆ.ಜಿಗೆ ₹70-80ರವರೆಗೆ ಇದೆ.

                    ದರ ನಿಯಂತ್ರಿಸಲು ಕೇಂದ್ರ ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ಈರುಳ್ಳಿ ಬೆಲೆ ಹೆಚ್ಚಿರುವ ರಾಜ್ಯಗಳಲ್ಲಿ ತನ್ನ ಬಳಿ ಇರುವ ಹೆಚ್ಚುವರಿ ದಾಸ್ತಾನನ್ನು ಕೆ.ಜಿಗೆ ₹25ರಂತೆ ಮಾರಾಟ ಮಾಡುತ್ತಿದೆ.

                   ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್‌ 1ರಿಂದ ಆಗಸ್ಟ್‌ 4ರವರೆಗಿನ ಅವಧಿಯಲ್ಲಿ 9.75 ಲಕ್ಷ ಟನ್‌ನಷ್ಟು ಈರುಳ್ಳಿ ರಫ್ತು ಮಾಡಲಾಗಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries