HEALTH TIPS

ಗುಜರಾತ್‌ ಮೂಲದ ವ್ಯಕ್ತಿಯನ್ನು ಬಂಧಿಸಿದ ಮುಂಬೈ ಪೊಲೀಸ್

               ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ), ಎಚ್‌ಡಿಎಫ್‌ಸಿ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌ ಸೇರಿದಂತೆ 11 ಕಡೆಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಬೆದರಿಕೆ ಇ-ಮೇಲ್ ಕಳುಹಿಸಿದ್ದ ವ್ಯಕ್ತಿಯನ್ನು ಮುಂಬೈನ ಕ್ರೈಂ ಬ್ರಾಂಚ್ ಪೊಲೀಸರು ಬುಧವಾರ ಬಂಧಿಸಿದ್ದಾರೆ.


                 ಇ-ಮೇಲ್ ಹಿಂದಿರುವ ಉದ್ದೇಶವನ್ನು ಅರಿತುಕೊಳ್ಳಲು ವಿಚಾರಣೆ ಆರಂಭಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.


                ಗುಜರಾತ್‌ನ ವಡೋದರ ಮೂಲದ ವ್ಯಕ್ತಿ ಬಂಧನಕ್ಕೊಳಗಾದವ.

                ಆರ್‌ಬಿಐ ಕಚೇರಿ, ಎಚ್‌ಡಿಎಫ್‌ಸಿ ಹಾಗೂ ಐಸಿಸಿಐ ಬ್ಯಾಂಕ್‌ ಸೇರಿದಂತೆ ಮುಂಬೈ 11 ಕಡೆಗಳಲ್ಲಿ ಬಾಂಬ್‌ ಇರಿಸಲಾಗಿದೆ ಎಂದು ಆರ್‌ಬಿಐಗೆ ಆರೋಪಿ ಇ-ಮೇಲ್ ಮಾಡಿದ್ದ. ಅಲ್ಲದೆ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್‌ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ರಾಜೀನಾಮೆ ನೀಡಬೇಕು ಎನ್ನುವ ಆಗ್ರಹವೂ ಅದರಲ್ಲಿ ಇತ್ತು.

                    ಇ-ಮೇಲ್‌ನಲ್ಲಿದ್ದ 11 ತಾಣಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿದ್ದರು. ಅಲ್ಲಿ ಬಾಂಬ್ ಅಥವಾ ಯಾವುದೇ ಶಂಕಾಸ್ಪದ ವಸ್ತುಗಳು ಪತ್ತೆಯಾಗಿರಲಿಲ್ಲ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries