HEALTH TIPS

ಉಗ್ರರ ಪತ್ತೆಗಾಗಿ ಮುಂದುವರಿದ ಕಾರ್ಯಾಚರಣೆ

Top Post Ad

Click to join Samarasasudhi Official Whatsapp Group

Qries

               ಪೂಂಛ್/ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ಉಗ್ರರ ದಾಳಿ ನಡೆದ ಪ್ರದೇಶದಲ್ಲಿ ಭಯೋತ್ಪಾದಕರನ್ನು ಮಟ್ಟ ಹಾಕಲು ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ.

                ಗುರುವಾರದಂದು ಎರಡು ಸೇನಾ ವಾಹನಗಳ ಮೇಲೆ ಉಗ್ರರು ನಡೆಸಿದ್ದ ಹಠಾತ್ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದರು.  ಇಬ್ಬರು ಯೋಧರು ಗಾಯಗೊಂಡಿದ್ದರು.

ಸುರಾನ್‌ಕೋಟ್ ಪೊಲೀಸ್ ಠಾಣಾ ವ್ಯಾಪ್ತಿಯ ಡೇರಾ ಕಿ ಗಲಿ ಮತ್ತು ಬುಫ್ಲಿಯಾಜ್‌ ನಡುವೆ ಧಾತ್ಯರ್ ಮೋರ್‌ನಲ್ಲಿ ದಾಳಿ ನಡೆದಿತ್ತು.


             ಉಗ್ರರ ಪತ್ತೆಗಾಗಿ ವೈಮಾನಿಕ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ವಿಶೇಷ ತರಬೇತಿ ಪಡೆದ ಸ್ನಿಫರ್ ಶ್ವಾನ ಬಳಕೆ ಮಾಡಲಾಗಿದೆ. ಈ ಪ್ರದೇಶದಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.

                ಕಾರ್ಯಾಚರಣೆ ಮುಂದುವರಿದಿದ್ದು, ಇಡೀ ಪ್ರದೇಶವನ್ನು ಸೇನೆ ಸುತ್ತುವರಿದಿದೆ. ಹೆಚ್ಚುವರಿ ಸೇನಾಪಡೆಯನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೂಂಛ್ ಜಿಲ್ಲೆಯಲ್ಲಿ ಸೇನಾ ಕಾರ್ಯಾಚರಣೆಗೆ ಸಂಬಂಧಿಸಿದ 'ಎಎನ್‌ಐ' ವಿಡಿಯೊ

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries