HEALTH TIPS

ಮಧ್ಯಪ್ರದೇಶ : ಮೆರವಣಿಗೆ ಮೇಲೆ ಕಲ್ಲು ತೂರಾಟ: ಹಲವೆಡೆ ಸೆಕ್ಷನ್‌ 144 ಜಾರಿ

Top Post Ad

Click to join Samarasasudhi Official Whatsapp Group

Qries

              ಶಾಜಾಪುರ: ಧಾರ್ಮಿಕ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಕಾರಣ ಮಧ್ಯಪ್ರದೇಶದ ಶಾಜಾಪುರ ನಗರದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಹಲವೆಡೆ ಸೆಕ್ಷನ್‌ 144 ಹೇರಲಾಗಿದೆ.

         ಶಾಜಾಪುರದ ಮಗರಿಯಾ ಪ್ರದೇಶದಲ್ಲಿ ಸೋಮವಾರ ಸಂಜೆ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಕಲ್ಲು ತೂರಾಟ ನಡೆದಿದ್ದು, ಒಬ್ಬರು ಗಾಯಗೊಂಡಿದ್ದಾರೆ.

             ಈ ಸಂಬಂಧ ಎಫ್‌ಐಆರ್‌ ದಾಖಲಾಗಿದ್ದು, ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

              ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯ ಅಂಗವಾಗಿ ಹಮ್ಮಿಕೊಂಡಿದ್ದ ಮೆರವಣಿಗೆಗೆ ಗುಂಪೊಂದು ತಡೆಯೊಡ್ಡಿದೆ ಮತ್ತು ಕಟ್ಟಡಗಳ ಮಹಡಿ ಮೇಲಿನಿಂದ ಕೆಲವರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.


Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries