HEALTH TIPS

ಫೆ.11. ಚಿಗುರುಪಾದೆ ದೇವಸ್ಥಾನ ವಾರ್ಷಿಕ ಜಾತ್ರಾ ಮಹೋತ್ಸವ

Top Post Ad

Click to join Samarasasudhi Official Whatsapp Group

Qries

                 ಮಂಜೇಶ್ವರ: ಇತಿಹಾಸ ಪ್ರಸಿದ್ದ ಚಿಗುರುಪಾದೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾಮಹೋತ್ಸವವು ಫೆ. 11 ರಂದು ಭಾನುವಾರ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬ್ರಹ್ಮಶ್ರೀ ವರ್ಕಾಡಿ ದಿನೇಶ ಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಜರಗಲಿದೆ.

               ಬೆಳಿಗ್ಗೆ 7ರಿಂದ  ಉಷಃಕಾಲ ಪೂಜೆ, ಗಣಹೋಮ, ನವಕ ಕಲಶಾಭಿಷೇಕ, ಏಕಾದಶ ರುದ್ರಾಭಿಷೇಕ, 10.30ರಿಂದ ಸಂಗೀತ ಕಾರ್ಯಕ್ರಮ ‘ವಿದುಷಿ ಡಾ.ಸುಚಿತ್ರಾ ಹೊಳ್ಳ ಪುತ್ತೂರು ಮತ್ತು ಸಹ ಸಂಗೀತ ಕಲಾವಿದರಿಂದ ತ್ಯಾಗರಾಜರ ಪಂಚರತ್ನ ಕೃತಿಗಳ ಗೋಷ್ಠಿ ಜರಗಲಿದೆ. ಮಧ್ಯಾಹ್ನ 12ರಿಂದ ಮಹಾಪೂಜೆ, ಶ್ರೀದೇವರಬಲಿ, ಪ್ರಸಾದ ವಿತರಣೆ ಅನ್ನಸಂತರ್ಪಣೆ ಜರಗಲಿದೆ. ಸಂಜೆ 5.30ರಿಂದ ‘ರಾಗ ಸುಧಾ ರಸ’  ರಾಗಸುಧಾ ಸಂಗೀತಶಾಲೆ ಹೊಸಂಗಡಿ ಮಂಜೇಶ್ವರ ಶಿಲ್ಪಾ ಭಟ್ ಇವರ ಶಿಷ್ಯರಿಂದ  ರಾತ್ರಿ 7ಕ್ಕೆ ರಂಗಪೂಜೆ, 8ರಿಂದ ಭೂತಬಲಿ ಉತ್ಸವ, ದರ್ಶನಬಲಿ ಉತ್ಸವ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ ಜರಗಲಿದೆ ಎಂದು ಕ್ಷೇತ್ರ ಪ್ರಕಟಣೆ ತಿಳಿಸಿದೆ.



Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.
Qries